July 23, 2026
Mumbai News Kannada
ಮುಂಬಯಿ

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ – ಕರುಣಾಕರ ಎಂ. ಶೆಟ್ಟಿ







ಮುಂಬಯಿ : ನಮ್ಮ ತುಳು ನಾಡು ಶ್ರೀಮಂತ ಸಂಸ್ಕೃತಿಯನ್ನು ಹೊಂದಿಕೊಂಡಿದ್ದು ಹೊರನಾಡಲ್ಲಿ ನಮ್ಮ ತುಳು ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮವು ನಮ್ಮವರಿಂದ ನಿರಂತರವಾಗಿ ನಡೆಯುತಿರುವುದು ನಿಜಕ್ಕೂ ಪ್ರಶಂಸನೀಯ ತುಳು ಸಂಘ ಬೊರಿವಲಿ ಯ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿ ಯವರು ನುಡಿದರು.

ತುಳು ಸಂಘ ಬೊರಿವಲಿ ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಫೆ. ೧8 ರಂದು ಮಹಿಷ ಮರ್ಧಿನಿ ದೇವಸ್ಥಾನ, ಜಯರಾಜ್ ನಗರ, ಬೊರಿವಲಿ(ಪ), ಇಲ್ಲಿ ನಡೆದಿದ್ದು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ  ಅವರು ನಮ್ಮ ಸಂಘವು ತುಳು ಬಾಷೆ ಸಂಸ್ಕೃತಿಯನ್ನು ಉಳಿಸಲು ಆರಂಭದಿಂದಲೇ ಹಲವಾರು ಸಮಾಜಪರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಹಿಳಾ ವಿಭಾಗದ ವತಿಯಿಂದ ಪ್ರತೀ ವರ್ಷ ಅರಸಿನ ಕುಂಕುಮ ಕಾರ್ಯಕ್ರಮ ನಡೆಯುತ್ತಿದ್ದು ಪರಿಸರದ ತುಳು ಕನ್ನಡ ಮಹಿಳೆಯರು ಒಂದಾಗುತ್ತಿರುವುದು ಅಭಿನಂದನೀಯ ಎನ್ನುತ್ತಾ ಸಂಘದ ಚಟುವಟಿಕೆಗಳ ಬಗ್ಗೆ ಮಾಯಿತಿಯಿತ್ತರು. 

ಹಿರಿಯ ಸಾಹಿತಿ ಸೀಮಂತೂರು ಚಂದ್ರಹಾಸ  ಸುವರ್ಣ ಮಾತನಾಡುತ್ತಾ ಯುವ ಜನಾಂಗವು ತುಳು ಭಾಷೆಯನ್ನು ಕಲಿಯುವಂತಾಗಲು ಅವರಿಗೆ ಹಿರಿಯರು ಪ್ರೋತ್ಸಾಹಿಸಬೇಕು. ತುಳು  ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಅಗತ್ಯ ಇದೆ. ಇದಕ್ಕಾಗಿ ಯುವ ಜನಾಂಗಕ್ಕೆ ತುಳು ಬಾಷೆಯನ್ನು ಕಲಿಯಲು ಪ್ತೋತ್ಸಾಹಿಸಬೇಕಾರಿದೆ ಎಂದರು. 

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದೇವಾಡಿಗ ಸಂಘ ಮುಂಬಯಿಯ  ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಪ್ರತಿಭಾ ಗಣೇಶ್ ದೇವಾಡಿಗ ಅವರು ಈ ಸಂದರ್ಭದಲ್ಲಿ ಮಾತನಾಡಿ ಹಳದಿ ಕುಂಕುಮದ ಮಹತ್ವದ  ಬಗ್ಗೆ  ಮಾಹಿತಿಯಿತ್ತು ಕಾರ್ಯಕ್ರಮಕ್ಕೆ ಶುಭ ಕೋರಿದರು. 

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತಿಲೋತ್ತಮ ವೈದ್ಯ ಎಲ್ಲರನ್ನು ಸ್ವಾಗತಿಸಿ ಮಹಿಳಾ ವಿಭಾಗದ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಮಹಿಷ ಮರ್ಧಿನಿ ದೇವಸ್ಥಾನದ ಕಾರ್ಯನಿರ್ವಾಹಕ ಟ್ರಷ್ಟಿ ಪ್ರದೀಪ್ ಎಸ್. ಶೆಟ್ಟಿ, ಉಷಾ ಗೋಪಾಲ್ ಶೆಟ್ಟಿ, ರತಿ ಶಂಕರ್ ಶೆಟ್ಟಿ ಮೊದಲಾದವರನ್ನು ಗೌರವಿಸಲಾಯಿತು.  

ಪ್ರಾರಂಭದಲ್ಲಿ ಮಹಿಳಾ ಸದಸ್ಯರಿಂದ ಭಜನೆ, ಸಭಾ ಕಾರ್ಯಕ್ರಮದ ನಂತರ ಉಪಸ್ಥಿತರಿದ್ದ ಎಲ್ಲಾ ಮಹಿಳೆಯರು ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಬಾಗವಹಿಸಿದರು. ತುಳು ಸಂಘದ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ, ಉಪಾದ್ಯಕ್ಷರಾದ ಹರೀಷ್ ಮೈಂದನ್, ಕೋಶಾಧಿಕಾರಿ ಚಂದ್ರಹಾಸ ಬೆಳ್ಚಡ,  ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಕುಸುಮಾ ಶೆಟ್ಟಿ, ಹಾಗೂ ಸಮಿತಿಯ ಮತ್ತು ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಕಾರ್ಯದರ್ಶಿ ಲಕ್ಷ್ಮಿ ದೇವಾಡಿಗ ದನ್ಯವಾದ ಸಮರ್ಪಿಸಿದರು.



Related posts

ಬಂಟರ ಸಂಘ ಮುಂಬಯಿಯ ಡೊಂಬಿವಲಿ ಪ್ರಾದೇಶಿಕ ಸಮೀತಿಯ ಮಹಿಳಾ ವಿಭಾಗದ ವತಿಯಿಂದ ಅರಷಿಣ ಕುಂಕುಮ ಹಾಗೂ ಆರೋಗ್ಯಕುರಿತು ವಿಚಾರ ಸಂಕಿರಣ.

Mumbai News Desk

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಮುಂಬೈ ವಿಶ್ವದ 5ನೇ ಅತ್ಯುತ್ತಮ ಆಹಾರ ನಗರ : ಮಾತುಂಗದ ರಾಮ್ ಆಶ್ರಯ ಐಕಾನಿಕ್ ರೆಸ್ಟೋರೆಂಟ್ ಗಳಲ್ಲಿ ಒಂದು

Mumbai News Desk

ಚಿಣ್ಣರ ಬಿಂಬ ನೆರೂಲ್ ಶಿಬಿರದ   ಕನ್ನಡ ಕಲಿಕೆ ಹಾಗೂ ಇತರ ಚಟುವಟಿಕೆಗಳು ಪ್ರಾರಂಭ

Mumbai News Desk

ಬಜೆ ಮೊಗವೀರ ಸುವರ್ಣ ಮೂಲಸ್ಥಾನ ಮುಂಬಾಯಿ ಶಾಖೆ: ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆ

Mumbai News Desk