July 23, 2026
Mumbai News Kannada
ಮಹಾರಾಷ್ಟ್ರಸುದ್ದಿ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ







ಮಹಾರಾಷ್ಟ್ರ ರಾಜ್ಯದ ಮಾಜಿ ಮುಖ್ಯಮಂತ್ರಿ, ಲೋಕಸಭೆಯ ಮಾಜಿ ಸ್ಪೀಕರ್, ಶಿವ ಸೇನಾ ನಾಯಕ ಮನೋಹರ್ ಜೋಶಿ ಅವರು ಇಂದು ಬೆಳ್ಳಿಗ್ಗೆ (ಫೆ.23) ನಿಧನರಾಗಿದ್ದಾರೆ.
86 ವರ್ಷದ ಜೋಶಿ ಅವರು ಅಸೌಖ್ಯದ ನಿಮ್ಮಿತ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕೆತ್ಸೆಗೆ ಸ್ಪಂದಿಸದ ಜೋಶಿ ಅವರು ಇಂದು ಬೆಳ್ಳಿಗೆ 5 ಗಂಟೆಗೆ ಇಹಲೋಕ ತ್ಯಜಿಸಿದರು, ಎಂದು ಅವರ ಕುಟುಂಬಸ್ತರು ತಿಳಿಸಿದ್ದಾರೆ.
ಶಿಕ್ಷಕರಾಗಿ ತನ್ನ ವೃತ್ತಿ ಜೀವನ ಆರಂಭಿಸಿದ ಮನೋಹರ್ ಜೋಶಿ ಶಿವಸೇನೆಗೆ ಸೇರ್ಪಡೆಯಾಗಿ ರಾಜಕೀಯ ರಂಗ ಪ್ರವೇಶಿಸಿದ್ದರು. ಬಳಿಕ ಮುಖ್ಯಮಂತ್ರಿ ಆಗಿ 1995 ರಿಂದ 1999ರ ತನಕ ಸೇವೆ ಸಲ್ಲಿಸಿದ್ದರು.
2002 ರಿಂದ 2004ರ ತನಕ ಲೋಕಸಭಾ ಸ್ಪೀಕರ್ ಆಗಿ ಅವರು ಕಾರ್ಯ ನಿರ್ವಹಿಸಿದ್ದರು.ಶಿವಸೇನೆಯ ಸುಪ್ರೀಮೋ ದಿ. ಬಾಳಸಾಹೇಬ್ ಠಾಕ್ರೆ ಅವರ ಆಪ್ತರಾಗಿ ಮನೋಹರ್ ಜೋಶಿ ಗುರುತಿಸಿ ಕೊಂಡಿದ್ದರು.
ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ನ ಶಿವಾಜಿ ಪಾರ್ಕ್ ನ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಸ್ತರು ತಿಳಿಸಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.

Mumbai News Desk

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಡಿ.ಕೆ. ಶಿವಕುಮಾರ್ ಅವರಿಗೆ ಹಿತೈಷಿ ತೋನ್ಸೆ ಜಯಕೃಷ್ಣ ಶೆಟ್ಟಿ ಅವರಿಂದ ಆತ್ಮೀಯ ಅಭಿನಂದನೆ: ಪರಿಸರ ಸಂಘಟನೆಯ ಕಾರ್ಯವೈಖರಿಗೆ ನಿಯೋಜಿತ ಸಿಎಂ ಶ್ಲಾಘನೆ

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk