July 23, 2026
Mumbai News Kannada
ಮುಂಬಯಿ

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ







ಅರಸಿನ ಕುಂಕುಮ ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ – ಕರುಣಾಕರ ಎಂ. ಶೆಟ್ಟಿ

ಮುಂಬಯಿ : ನಮ್ಮ ತುಳು ನಾಡು ಶ್ರೀಮಂತ ಸಂಸ್ಕೃತಿಯನ್ನು ಹೊಂದಿಕೊಂಡಿದ್ದು ಹೊರನಾಡಲ್ಲಿ ನಮ್ಮ ತುಳು ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮವು ನಮ್ಮವರಿಂದ ನಿರಂತರವಾಗಿ ನಡೆಯುತಿರುವುದು ನಿಜಕ್ಕೂ ಪ್ರಶಂಸನೀಯ ತುಳು ಸಂಘ ಬೊರಿವಲಿ ಯ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿ ಯವರು ನುಡಿದರು.

ತುಳು ಸಂಘ ಬೊರಿವಲಿ ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಫೆ. ೧8 ರಂದು ಮಹಿಷ ಮರ್ಧಿನಿ ದೇವಸ್ಥಾನ, ಜಯರಾಜ್ ನಗರ, ಬೊರಿವಲಿ(ಪ), ಇಲ್ಲಿ ನಡೆದಿದ್ದು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ  ಅವರು ನಮ್ಮ ಸಂಘವು ತುಳು ಬಾಷೆ ಸಂಸ್ಕೃತಿಯನ್ನು ಉಳಿಸಲು ಆರಂಭದಿಂದಲೇ ಹಲವಾರು ಸಮಾಜಪರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಹಿಳಾ ವಿಭಾಗದ ವತಿಯಿಂದ ಪ್ರತೀ ವರ್ಷ ಅರಸಿನ ಕುಂಕುಮ ಕಾರ್ಯಕ್ರಮ ನಡೆಯುತ್ತಿದ್ದು ಪರಿಸರದ ತುಳು ಕನ್ನಡ ಮಹಿಳೆಯರು ಒಂದಾಗುತ್ತಿರುವುದು ಅಭಿನಂದನೀಯ ಎನ್ನುತ್ತಾ ಸಂಘದ ಚಟುವಟಿಕೆಗಳ ಬಗ್ಗೆ ಮಾಯಿತಿಯಿತ್ತರು. 

ಹಿರಿಯ ಸಾಹಿತಿ ಸೀಮಂತೂರು ಚಂದ್ರಹಾಸ  ಸುವರ್ಣ ಮಾತನಾಡುತ್ತಾ ಯುವ ಜನಾಂಗವು ತುಳು ಭಾಷೆಯನ್ನು ಕಲಿಯುವಂತಾಗಲು ಅವರಿಗೆ ಹಿರಿಯರು ಪ್ರೋತ್ಸಾಹಿಸಬೇಕು. ತುಳು  ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಅಗತ್ಯ ಇದೆ. ಇದಕ್ಕಾಗಿ ಯುವ ಜನಾಂಗಕ್ಕೆ ತುಳು ಬಾಷೆಯನ್ನು ಕಲಿಯಲು ಪ್ತೋತ್ಸಾಹಿಸಬೇಕಾರಿದೆ ಎಂದರು. 

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದೇವಾಡಿಗ ಸಂಘ ಮುಂಬಯಿಯ  ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಪ್ರತಿಭಾ ಗಣೇಶ್ ದೇವಾಡಿಗ ಅವರು ಈ ಸಂದರ್ಭದಲ್ಲಿ ಮಾತನಾಡಿ ಹಳದಿ ಕುಂಕುಮದ ಮಹತ್ವದ  ಬಗ್ಗೆ  ಮಾಹಿತಿಯಿತ್ತು ಕಾರ್ಯಕ್ರಮಕ್ಕೆ ಶುಭ ಕೋರಿದರು. 

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತಿಲೋತ್ತಮ ವೈದ್ಯ ಎಲ್ಲರನ್ನು ಸ್ವಾಗತಿಸಿ ಮಹಿಳಾ ವಿಭಾಗದ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಮಹಿಷ ಮರ್ಧಿನಿ ದೇವಸ್ಥಾನದ ಕಾರ್ಯನಿರ್ವಾಹಕ ಟ್ರಷ್ಟಿ ಪ್ರದೀಪ್ ಎಸ್. ಶೆಟ್ಟಿ, ಉಷಾ ಗೋಪಾಲ್ ಶೆಟ್ಟಿ, ರತಿ ಶಂಕರ್ ಶೆಟ್ಟಿ ಮೊದಲಾದವರನ್ನು ಗೌರವಿಸಲಾಯಿತು.  

ಪ್ರಾರಂಭದಲ್ಲಿ ಮಹಿಳಾ ಸದಸ್ಯರಿಂದ ಭಜನೆ, ಸಭಾ ಕಾರ್ಯಕ್ರಮದ ನಂತರ ಉಪಸ್ಥಿತರಿದ್ದ ಎಲ್ಲಾ ಮಹಿಳೆಯರು ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಬಾಗವಹಿಸಿದರು. ತುಳು ಸಂಘದ ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ, ಉಪಾದ್ಯಕ್ಷರಾದ ಹರೀಷ್ ಮೈಂದನ್, ಕೋಶಾಧಿಕಾರಿ ಚಂದ್ರಹಾಸ ಬೆಳ್ಚಡ,  ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಕುಸುಮಾ ಶೆಟ್ಟಿ, ಸವಿತ ಶೆಟ್ಟಿ, ಕಸ್ತೂರಿ ಶೆಟ್ಟಿ, ಶೋಭಾ ಶೆಟ್ಟಿ ಹಾಗೂ ಸಮಿತಿಯ ಮತ್ತು ಉಪಸಮಿತಿಗಳ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಕಾರ್ಯದರ್ಶಿ ಲಕ್ಷ್ಮಿ ದೇವಾಡಿಗ ದನ್ಯವಾದ ಸಮರ್ಪಿಸಿದರು.



Related posts

ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರದ ಸ್ವಂತ ಕಾರ್ಯಾಲಯ ಉದ್ಘಾಟನೆ,

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ 11ನೇ ಶರನ್ನವರಾತ್ರಿ ಮಹೋತ್ಸವ ಶ್ರದ್ಧೆ ಭಕ್ತಿಯಿಂದ ಸಂಪನ್ನ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಕುಣಿತ ಭಜನೆ, ಯಕ್ಷಗಾನ ತಾಳಮದ್ದಳೆಗೆ ಚಾಲನೆ,

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ವಿಶ್ವ ಮಹಿಳಾ ದಿನಾಚರಣೆ

Mumbai News Desk