July 27, 2026
Mumbai News Kannada
ಮುಂಬಯಿ

ಡೊಂಬಿವಿಲಿಯ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮ







ಡೊಂಬಿವಲಿ ಪಶ್ಚಿಮದ ಯಶವಂತ ನಗರದಲ್ಲಿರುವ ಮುಂಬ್ರಾ ಮಿತ್ರ ಭಜನಾ ಮಂಡಳಿ (ರಿ) ಇದರ ಸಂಚಾಲಕತ್ವದ ಶ್ರೀ ಮಹಾವಿಷ್ಣು ಮಂದಿರದಲ್ಲಿ ವೈ. ಅನಂತ ಪದ್ಮನಾಭ ಭಟ್ ಇವರಿಂದ ಪುರಂದರ ದಾಸರಾ ಆರಾಧನಾ ಮಹೋತ್ಸವದ ನಿಮಿತ್ತ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮವು ಫೆ.19 ರಂದು ಸೋಮವಾರ ಸಂಜೆ 7 ರಿಂದ 10 ರ ತನಕ ಮಂದಿರದ ಸಭಾಗ್ರಹದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಹರಿದಾಸರಾದ ವಿದ್ವಾನ್ ವೈ. ಅನಂತಪದ್ಮನಾಭ ಭಟ್ ಹಾಗು ಅವರೊಂದಿಗೆ ಹಾರ್ಮೋನಿಯಂ ವಾದಕರಾದ ಶ್ರೀ ಶಿವರಾಮ ಭಾಗವತ್ ಯೆಲ್ಲಾಪುರ ಹಾಗೂ ಮಾನಸ್ ಬಂಗೇರ ರವರಿಗೆ ಮಂದಿರದ ವತಿಯಿಂದ ಗೌರವಿಸಲಾಯಿತು.

ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ , ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ ಉಪಾಧ್ಯಕ್ಷರಾದ ಅರವಿಂದ್ ಪದ್ಮಶಾಲಿ, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್ , ಮಹಿಳಾ ವಿಭಾಗದ ಕಾರ್ಯದ್ಯೆಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು , ಹಾಗು ತುಳು ಕನ್ನಡ ಸಂಘ ಸಂಸ್ಥೆಯ ಹೆಚ್ಚಿನ ಸದಸ್ಯರುಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿ ಯಾಗಲು ಸಹಕರಿಸಿದರು. ಮಂದಿರ ದ್ ಉಪ ಬುವಾಜಿ ಶ್ರೀಯುತ ಲೀಲೆಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾಠ್ಯಕ್ರಮ ,

Mumbai News Desk

ಡಾ. ಪ್ರಾಜ್ಞಾ ಸಾಲ್ಯಾನ್ . ಎಂ. ಡಿ. ಎಸ್. ನಲ್ಲಿ ಉನ್ನತ ಸಾಧನೆ

Mumbai News Desk

ಮುಂಬೈ ಕನ್ನಡಿಗರಿಗೆ ಸಂತಸದ ಸುದ್ದಿ: ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10ನೇ ತರಗತಿ ಉಚಿತ ಪ್ರವೇಶ ಆರಂಭ

Mumbai News Desk

12ನೇ ತರಗತಿಯ ಪರೀಕ್ಷೆಯಲ್ಲಿ. ಅನನ್ಯ ಬಿ ಕುಲಾಲ್. ಶೇ  86.50% 

Mumbai News Desk

ಕುಲಾಲ ಸಂಘ ಮುಂಬಯಿ,ಥಾಣ, ಕಸರಾ , ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಹಳದಿ ಕುಂಕುಮ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ತುಳು ದಿನಾಚರಣೆ,ಬಾಷೆ ನಶಿಸಿದಲ್ಲಿ ನಾವು ಸುರಕ್ಷಿತರು ಎನ್ನಲಾಗುದಿಲ್ಲ – ಶಿಮಂತೂರು ಚಂದ್ರಹಾಸ ಸುವರ್ಣ

Mumbai News Desk