April 2, 2025
ಸುದ್ದಿ

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

ಗಜಲ್ ಸಂಗೀತದ ಮೂಲಕ ಜನಪ್ರಿಯತೆಯನ್ನು ಪಡೆದಿದ್ದ ಖ್ಯಾತ ಗಾಯಕ ಪಂಕಜ್ ಉಧಾಸ್ (72 ವರ್ಷ) ಇಂದು (ಫೆ.26)ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದೀರ್ಘ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಗಜಲ್ ಗಾಯಕರಾಗಿ ತನ್ನ ತನ್ನ ವೃತ್ತಿ ಜೀವನ ಆರಂಭಿಸಿದ ಅವರು ಅಲ್ಪ ಕಾಲದಲ್ಲಿ, ತನ್ನ ಕಂಠ ಸಿರಿಯ ಮೂಲಕ ಸಂಗೀತ ಪ್ರಿಯರನ್ನು ಆಕರ್ಷಿಸಿದ್ದರು.
1980 ರಲ್ಲಿ ಅವರು ಹೊರ ತಂದ “ಅಹಟ್ ” ದ್ವನಿ ಸುರುಳಿ ಅವರಿಗೆ ಮತ್ತಷ್ಟು ಖ್ಯಾತಿ ತಂದಿತು.
ಮಹೇಶ್ ಭಟ್ ಅವರ “ನಾಮ್” ಚಿತ್ರದ ಚಿಟ್ಟಿ ಆಯಿ ಹೈ,…. ಗೀತೆ ಹಿಟ್ ಆದ ಬಳಿಕ ಅನೇಕ ಬಾಳಿವುಡ್ ಸೂಪರ್ ಹಿಟ್ ಹಾಡುಗಳಿಗೆ ದ್ವನಿ ನೀಡಿದ್ದರು.

ಅವರ ಸಾಧನೆಯನ್ನು ಗುರುತಿಸಿದ ಭಾರತ ಸರಕಾರ ಅವರಿಗೆ 2006 ರಲ್ಲಿ ಪದ್ಮ ಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.
ಕನ್ನಡ ಚಿತ್ರ ರಂಗದ ಸೂಪರ್ ಸ್ಟಾರ್ ಸುಧೀಪ್ ಅವರ “ಸ್ವರ್ಶ” ಚಿತ್ರದ “ಬರೆಯದ ಮೌನದ ಕವಿತೆ” ಹಾಗೂ “ಚಂದಕ್ಕಿಂತ ಚಂದ ನೀನೇ ಸುಂದರ” ಗೀತೆಗಳು ಉಧಾಸ್ ಅವರ ಕಂಠದಲ್ಲಿ ಉತ್ತಮವಾಗಿ ಮೂಡಿಬಂದಿತ್ತು.
ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಕರುನಾಡಿನ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

Related posts

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk