32 C
Mumbai
April 24, 2026
Mumbai News Kannada
ಸುದ್ದಿ

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ





ಗಜಲ್ ಸಂಗೀತದ ಮೂಲಕ ಜನಪ್ರಿಯತೆಯನ್ನು ಪಡೆದಿದ್ದ ಖ್ಯಾತ ಗಾಯಕ ಪಂಕಜ್ ಉಧಾಸ್ (72 ವರ್ಷ) ಇಂದು (ಫೆ.26)ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದೀರ್ಘ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಗಜಲ್ ಗಾಯಕರಾಗಿ ತನ್ನ ತನ್ನ ವೃತ್ತಿ ಜೀವನ ಆರಂಭಿಸಿದ ಅವರು ಅಲ್ಪ ಕಾಲದಲ್ಲಿ, ತನ್ನ ಕಂಠ ಸಿರಿಯ ಮೂಲಕ ಸಂಗೀತ ಪ್ರಿಯರನ್ನು ಆಕರ್ಷಿಸಿದ್ದರು.
1980 ರಲ್ಲಿ ಅವರು ಹೊರ ತಂದ “ಅಹಟ್ ” ದ್ವನಿ ಸುರುಳಿ ಅವರಿಗೆ ಮತ್ತಷ್ಟು ಖ್ಯಾತಿ ತಂದಿತು.
ಮಹೇಶ್ ಭಟ್ ಅವರ “ನಾಮ್” ಚಿತ್ರದ ಚಿಟ್ಟಿ ಆಯಿ ಹೈ,…. ಗೀತೆ ಹಿಟ್ ಆದ ಬಳಿಕ ಅನೇಕ ಬಾಳಿವುಡ್ ಸೂಪರ್ ಹಿಟ್ ಹಾಡುಗಳಿಗೆ ದ್ವನಿ ನೀಡಿದ್ದರು.

ಅವರ ಸಾಧನೆಯನ್ನು ಗುರುತಿಸಿದ ಭಾರತ ಸರಕಾರ ಅವರಿಗೆ 2006 ರಲ್ಲಿ ಪದ್ಮ ಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.
ಕನ್ನಡ ಚಿತ್ರ ರಂಗದ ಸೂಪರ್ ಸ್ಟಾರ್ ಸುಧೀಪ್ ಅವರ “ಸ್ವರ್ಶ” ಚಿತ್ರದ “ಬರೆಯದ ಮೌನದ ಕವಿತೆ” ಹಾಗೂ “ಚಂದಕ್ಕಿಂತ ಚಂದ ನೀನೇ ಸುಂದರ” ಗೀತೆಗಳು ಉಧಾಸ್ ಅವರ ಕಂಠದಲ್ಲಿ ಉತ್ತಮವಾಗಿ ಮೂಡಿಬಂದಿತ್ತು.
ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಕರುನಾಡಿನ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.



Related posts

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ಕುಲಾಲ ಪ್ರತಿಷ್ಠಾನದ ಮಂಗಳೂರು, ವಿಜಯ ಕಲಾವಿದರ ಕಿನ್ನಿಗೋಳಿಯ ನಾಟಕ ಪ್ರದರ್ಶನ, ಮುಂಬಯಿ ಪ್ರವಾಸದ ಉದ್ಘಾಟನೆ.

Mumbai News Desk

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk

ಜ.11 : ಡಿವೈನ್ ಪಾರ್ಕ್‌ನ ಮಹಾರಾಷ್ಟ್ರ ಘಟಕದ ವತಿಯಿಂದ ಡಾಕ್ಟರ್‌ಜೀ ಅವರಿಗೆ ಶ್ರದ್ಧಾಂಜಲಿ ಹಾಗೂ ಪ್ರಾರ್ಥನಾ ಸಭೆ

Mumbai News Desk