July 23, 2026
Mumbai News Kannada
ಸುದ್ದಿ

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ







ಗಜಲ್ ಸಂಗೀತದ ಮೂಲಕ ಜನಪ್ರಿಯತೆಯನ್ನು ಪಡೆದಿದ್ದ ಖ್ಯಾತ ಗಾಯಕ ಪಂಕಜ್ ಉಧಾಸ್ (72 ವರ್ಷ) ಇಂದು (ಫೆ.26)ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದೀರ್ಘ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಗಜಲ್ ಗಾಯಕರಾಗಿ ತನ್ನ ತನ್ನ ವೃತ್ತಿ ಜೀವನ ಆರಂಭಿಸಿದ ಅವರು ಅಲ್ಪ ಕಾಲದಲ್ಲಿ, ತನ್ನ ಕಂಠ ಸಿರಿಯ ಮೂಲಕ ಸಂಗೀತ ಪ್ರಿಯರನ್ನು ಆಕರ್ಷಿಸಿದ್ದರು.
1980 ರಲ್ಲಿ ಅವರು ಹೊರ ತಂದ “ಅಹಟ್ ” ದ್ವನಿ ಸುರುಳಿ ಅವರಿಗೆ ಮತ್ತಷ್ಟು ಖ್ಯಾತಿ ತಂದಿತು.
ಮಹೇಶ್ ಭಟ್ ಅವರ “ನಾಮ್” ಚಿತ್ರದ ಚಿಟ್ಟಿ ಆಯಿ ಹೈ,…. ಗೀತೆ ಹಿಟ್ ಆದ ಬಳಿಕ ಅನೇಕ ಬಾಳಿವುಡ್ ಸೂಪರ್ ಹಿಟ್ ಹಾಡುಗಳಿಗೆ ದ್ವನಿ ನೀಡಿದ್ದರು.

ಅವರ ಸಾಧನೆಯನ್ನು ಗುರುತಿಸಿದ ಭಾರತ ಸರಕಾರ ಅವರಿಗೆ 2006 ರಲ್ಲಿ ಪದ್ಮ ಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.
ಕನ್ನಡ ಚಿತ್ರ ರಂಗದ ಸೂಪರ್ ಸ್ಟಾರ್ ಸುಧೀಪ್ ಅವರ “ಸ್ವರ್ಶ” ಚಿತ್ರದ “ಬರೆಯದ ಮೌನದ ಕವಿತೆ” ಹಾಗೂ “ಚಂದಕ್ಕಿಂತ ಚಂದ ನೀನೇ ಸುಂದರ” ಗೀತೆಗಳು ಉಧಾಸ್ ಅವರ ಕಂಠದಲ್ಲಿ ಉತ್ತಮವಾಗಿ ಮೂಡಿಬಂದಿತ್ತು.
ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಕರುನಾಡಿನ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.



Related posts

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ

Mumbai News Desk

ಉಡುಪಿ : ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರಿಗೆ ಮನವಿ ಸಲ್ಲಿಕೆ

Mumbai News Desk

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk

GST 2.0 : ಸರಳೀಕರಣಗೊಂಡ ಹೊಸ ತೆರಿಗೆ ವ್ಯವಸ್ಥೆ – 5% ಮತ್ತು 18% ಶ್ಲಾಬ್,

Mumbai News Desk

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk