33.1 C
Karnataka
April 1, 2025
ಪ್ರಕಟಣೆ

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘವು ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ನಿರ್ಮಿಸುತ್ತಿರುವ ಕುಲಾಲ ಭವನದ 4 ನೆಯ ಮಾಡಿಯಲ್ಲಿ ತೀರ್ಮಾನವಾಗುತ್ತಿರುವ ನಮ್ರತಾ ಜಗದೀಶ್ ರಾಮ ಬಂಜನ್ ಬ್ಯಾಂಕ್ವೆಟ್ ಹಾಲ್ ಮತ್ತು ಪಿಕೆ ಸಾಲ್ಯಾನ್ ವೇದಿಕೆಯ ಮುಹೂರ್ತ ಸಮಾರಂಭವು ಮಾರ್ಚ್ 8 ರಂದು ಬೆಳಿಗ್ಗೆ 10:30 ಗಂಟೆಗೆ ಜರಗಲಿದೆ.
ಕುಲಾಲ ಸಂಘದ ಅಧ್ಯಕ್ಷರಾದ ರಘು ಎ ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ನಡೆಲಿರುವ ಮುಹೂರ್ತ ಸಮಾರಂಭದಲ್ಲಿ
ವೀರನಾರಾಯಣ ಸೇವಾ ಟ್ರಸ್ಟ್ ಕುಲಶೇಖರ ಮಂಗಳೂರು ಇದರ ಕಾರ್ಯಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್ , ಮುಂಬೈಯ ಉದ್ಯಮಿ,ದಾನಿ ಸುನಿಲ್ ಆರ್ ಸಾಲಿಯನ್, ಜೈದೀಪ್ ಕನ್ಸ್ಟ್ರಕ್ಷನ್ ಅಂಬರನಾಥ್, ಇದರ ಮಾಲಕ ಜಗದೀಶ್ ರಾಮ ಬಂಜನ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕುಲಾಲ ಸಂಘ ಮುಂಬೈಯ ಗೌರವಾಧ್ಯಕ್ಷ ದೇವದಾಸ್ ಎಲ್ ಕುಲಾಲ್, ಉಪಾಧ್ಯಕ್ಷ ಡಿ. ಐ.ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಬಿ ಸಾಲ್ಯಾನ್, ಗೌರವ ಕೋಶಾಧಿಕಾರಿ ಜಯ ಎಸ್ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್ ಗುಜರನ್, ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಧ್ಯಕ್ಷ ಗಿರೀಶ್ ಬಿ ಸಾಲ್ಯಾನ್, ಕಾರ್ಯದರ್ಶಿ ಉಮೇಶ್ ಎಂ ಬಂಗೇರ, ಮಂಗಳೂರು ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ಬಂಗೇರ ಹಾಗೂ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಸ್ಥಳೀಯ ಸಮಿತಿಯ ಎಲ್ಲಾ ಕಾರ್ಯಧ್ಯಕ್ಷರು, ಯುವ ವಿಭಾಗ ಮತ್ತು ಸಂಘದ ಎಲ್ಲ ಸದಸ್ಯರು ವಿನಂತಿಸಿದ್ದಾರೆ.

Related posts

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಜ. 25: ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ

Mumbai News Desk

ಜ.5 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 11ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk