July 23, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.







ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘವು ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ನಿರ್ಮಿಸುತ್ತಿರುವ ಕುಲಾಲ ಭವನದ 4 ನೆಯ ಮಾಡಿಯಲ್ಲಿ ತೀರ್ಮಾನವಾಗುತ್ತಿರುವ ನಮ್ರತಾ ಜಗದೀಶ್ ರಾಮ ಬಂಜನ್ ಬ್ಯಾಂಕ್ವೆಟ್ ಹಾಲ್ ಮತ್ತು ಪಿಕೆ ಸಾಲ್ಯಾನ್ ವೇದಿಕೆಯ ಮುಹೂರ್ತ ಸಮಾರಂಭವು ಮಾರ್ಚ್ 8 ರಂದು ಬೆಳಿಗ್ಗೆ 10:30 ಗಂಟೆಗೆ ಜರಗಲಿದೆ.
ಕುಲಾಲ ಸಂಘದ ಅಧ್ಯಕ್ಷರಾದ ರಘು ಎ ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ನಡೆಲಿರುವ ಮುಹೂರ್ತ ಸಮಾರಂಭದಲ್ಲಿ
ವೀರನಾರಾಯಣ ಸೇವಾ ಟ್ರಸ್ಟ್ ಕುಲಶೇಖರ ಮಂಗಳೂರು ಇದರ ಕಾರ್ಯಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್ , ಮುಂಬೈಯ ಉದ್ಯಮಿ,ದಾನಿ ಸುನಿಲ್ ಆರ್ ಸಾಲಿಯನ್, ಜೈದೀಪ್ ಕನ್ಸ್ಟ್ರಕ್ಷನ್ ಅಂಬರನಾಥ್, ಇದರ ಮಾಲಕ ಜಗದೀಶ್ ರಾಮ ಬಂಜನ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕುಲಾಲ ಸಂಘ ಮುಂಬೈಯ ಗೌರವಾಧ್ಯಕ್ಷ ದೇವದಾಸ್ ಎಲ್ ಕುಲಾಲ್, ಉಪಾಧ್ಯಕ್ಷ ಡಿ. ಐ.ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಬಿ ಸಾಲ್ಯಾನ್, ಗೌರವ ಕೋಶಾಧಿಕಾರಿ ಜಯ ಎಸ್ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್ ಗುಜರನ್, ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಧ್ಯಕ್ಷ ಗಿರೀಶ್ ಬಿ ಸಾಲ್ಯಾನ್, ಕಾರ್ಯದರ್ಶಿ ಉಮೇಶ್ ಎಂ ಬಂಗೇರ, ಮಂಗಳೂರು ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ಬಂಗೇರ ಹಾಗೂ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಸ್ಥಳೀಯ ಸಮಿತಿಯ ಎಲ್ಲಾ ಕಾರ್ಯಧ್ಯಕ್ಷರು, ಯುವ ವಿಭಾಗ ಮತ್ತು ಸಂಘದ ಎಲ್ಲ ಸದಸ್ಯರು ವಿನಂತಿಸಿದ್ದಾರೆ.



Related posts

ಸೆಪ್ಟೆಂಬರ್‌ 14 : ಮುಂಬಯಿ ಕನ್ನಡ ಸಂಘದ 83ನೇ ವಾರ್ಷಿಕ ಮಹಾಸಭೆ

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ : ಅಂಧೇರಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಜ. 31ಕ್ಕೆ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk