30.9 C
Mumbai
June 8, 2026
Mumbai News Kannada
ಸುದ್ದಿ

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ





ಇನ್ಫೋಸಿಸ್ ಫೌಂಡೇಶನ್ ನ ಮುಖ್ಯಸ್ತೆಯಾಗಿರುವ ಡಾ. ಸುಧಾಮೂರ್ತಿ ಅವರನ್ನು ರಾಷ್ಟ್ರಪತಿ ಡ್ರಾಪದಿ ಮುರ್ಮು ಅವರು ಇಂದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿ, ಸುಧಾ ಮೂರ್ತಿ ಅವರನ್ನು ಅಭಿನಂದಿಸುತ್ತಾ “ರಾಷ್ಟ್ರಪತಿ ಅವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು ಸಂತಸ ತಂದಿದೆ, ಸಮಾಜ ಸೇವೆ, ಶಿಕ್ಷಣ ಸೇರಿದಂತ್ತೆ ವಿವಿಧ ಕ್ಷೇತ್ರದಲ್ಲಿ ಸುಧಾಮೂರ್ತಿ ಅವರ ಕೊಡುಗೆ ಅಪಾರ ಹಾಗೂ ಸ್ಫೂರ್ತಿದಾಯಕ. ರಾಜ್ಯ ಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ, ನಮ್ಮ ರಾಷ್ಟ್ರದ ಭವಿಷ್ಯ ವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಇದು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಅವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳಾ ದಿನಾಚರಣೆಯಂದು ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡುತ್ತಿರುವ ಸುಧಾಮೂರ್ತಿ ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು ವಿಶೇಷವಾಗಿತ್ತು.
ಸುಧಾಮೂರ್ತಿ ಅವರ ಸೇವೆಗಾಗಿ 2006ರಲ್ಲಿ ಪದ್ಮಶ್ರೀ, 2023ರಲ್ಲಿ ಪದ್ಮ ವಿಭೂಷಣ ಪುರಸ್ಕಾರ ಲಭಿಸಿತ್ತು.



Related posts

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

Mumbai News Desk

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ

Mumbai News Desk