30.9 C
Mumbai
June 8, 2026
Mumbai News Kannada
ಮುಂಬಯಿ

ಮೀರಾ ಡಹಾಣೂ ಬಂಟ್ಸ್ (ರಿ) ಪಾಲ್ಘರ್ ಬೊಯಿಸರ್ ವಿಭಾಗದವರಿಂದ ಸ್ನೇಹ ಸಮ್ಮಿಲನ.





     

   ಬಂಟರ ಪ್ರತಿಷ್ಟಿತ ಸಂಸ್ಥೆ ಮೀರಾ ಡಹಾಣೂ ಬಂಟ್ಸ್ ಇದರ ಪಾಲ್ಘರ್ ಬೊಯಿಸರ್ ವಿಭಾಗದವರಿಂದ ಇದೇ  ತಾ.09 ಮಾರ್ಚ್ ಶನಿವಾರದಂದು ಸಂಜೆ ಸದಸ್ಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರಗಿತು. ಬೊಯಿಸರ್ ನ ಪ್ರೀಮಿಯಮ್ ಹೋಟೆಲ್ ರೆಯಾಂಶ್ ಪ್ರೈಡ್ ನಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ  ಕಳೆದ ಫೆಬ್ರುವರಿ ತಾ.10 ರಂದು ವಿರಾರ್ ನಲ್ಲಿ    ಜರಗಿದ ಸಂಸ್ಥೆಯ ಕ್ರೀಡಾ ಉತ್ಸವದಲ್ಲಿನ ವಿಜೇತ ಸದಸ್ಯರನ್ನು ಗೌರವಿಸಲಾಯಿತು. ಹಾಗೂ ಇತ್ತೀಚೆಗೆ ಸರಾವಲಿ ಗ್ರಾಮಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಶ್ರೀಮತಿ ಲತಾ ಜಗದೀಶ್ ಶೆಟ್ಟಿ ಇವರನ್ನು ಸತ್ಕರಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಟ್ರಸ್ಟೀ ಕೆ.ಭುಜಂಗ ಶೆಟ್ಟಿ , ಗೌರವಾಧ್ಯಕ್ಷ ವಿರಾರ್ ಶಂಕರ್ ಶೆಟ್ಟಿ ಹಾಗೂ ಮಹಿಳಾ ಮತ್ತು ಯುವ ವಿಭಾಗ ಸೇರಿದಂತೆ ಇತರ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ” ಇದೇ ಮೊದಲ ಬಾರಿ ಎಂಬಂತೆ ಇಂದು ಜರಗಿದ ಈ  ಸ್ನೇಹ ಸಮ್ಮಿಲನದ ಮೂಲಕ ನಮ್ಮ ಸಮಾಜದ ಯುವಕರನ್ನು ಉತ್ತೇಜಿಸುವುದು ಹಾಗೂ ಡಹಾಣೂವಿನಿಂದ ಪಾಲ್ಘರ್ ತನಕ ವಿವಿಧ ಭಾಗಗಳಲ್ಲಿ ನೆಲೆಸಿರುವ ಬಂಟಬಾಂಧವರನ್ನು ಒಗ್ಗೂಡಿಸಿ ಪರಿಚಯ ಸಂಬಂಧ ಬೆಳೆಸುವುದು ಈ ಸುಂದರ ಸಂಜೆಯ ಕಾರ್ಯಕ್ರಮದ ಉದ್ದೇಶವಾಗಿದೆ ” ಎಂದು ಕೆ.ಭುಜಂಗ ಶೆಟ್ಟಿ ವಿವರಿಸಿ ಶುಭ ಹಾರೈಸಿದರು. 

   ವಿವಿಧ ಮನೋರಂಜನಾ ಆಟಗಳಲ್ಲಿ ಸದಸ್ಯರ ಮಕ್ಕಳು ಹಾಗೂ ಮಹಿಳೆಯರು ಭಾಗವಹಿಸಿದ್ದು ಪ್ರೀತಿ ಭೋಜನದೊಂದಿಗೆ  ಕಾರ್ಯಕ್ರಮ ಸಂಪನ್ನಗೊಂಡಿತು.

ಚಿತ್ರ  ಹಾಗೂ ವರದಿ :

ಪಿ.ಆರ್.ರವಿಶಂಕರ್ 8483980035



Related posts

ಚಿಣ್ಣರ ಬಿಂಬದ 21ನೆಯ ವಾರ್ಷಿಕ ಮಕ್ಕಳ ಉತ್ಸವ, ವಿಶ್ವಸ್ಥರ ಪದಗ್ರಹಣ.ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಯ ಉದ್ಘಾಟನೆ.

Mumbai News Desk

ಮಲಾಡ್ ಗೋವಿಂದ್ ನಗರ್ ದ ಶ್ರೀ ಅಂಬಿಕಾ  ಮಂದಿರದಲ್ಲಿ ಭಕ್ತಿ ಸಂಭ್ರಮದ ದಸರಾ ಮಹೋತ್ಸವ

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

 ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ,

Mumbai News Desk

ಭಾರತ್ ಬ್ಯಾಂಕಿನ ಅಂಧೇರಿ ಪೂರ್ವದ ಶಾಖೆಯ 30ನೇ ವರ್ಷ ಆಚರಣೆಯ ಸಂಭ್ರಮ.

Mumbai News Desk

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.

Mumbai News Desk