
ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಎಲ್ಲರ ಕುತೂಹಲ ಕೆರಳಿಸಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡದ ಅಭ್ಯರ್ಥಿಯಾಗಿ ಕಣಕಳಿಯಲಿದ್ದಾರೆ. ಅ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಪ್ರತಿನಿಧಿಸಿದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಲಭಿಸಿದೆ.
ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಯಾದಿ ಈ ರೀತಿ ಇದೆ :
ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ ಬಾಗಲಕೋಟೆ- ಪಿ.ಸಿ.ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋ
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ