35.8 C
Karnataka
March 31, 2025
ಸುದ್ದಿ

ಸದಾನಂದ ಪೂಜಾರಿ ಆಕಸ್ಮಿಕ ಸಾವು

ಕಾರ್ಕಳದ ಕುಕ್ಕುಂದೂರು ನಿವಾಸಿ ಸದಾನಂದ ಪೂಜಾರಿ (40) ಅವರು ಮಾ.16ರಂದು ರಾತ್ರಿ ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಅಘಾತಕಾರಿ ಘಟನೆ ತಡವಾಗಿ ತಿಳಿದು ಬಂದಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ಅವರ ಮೃತ ದೇಹ ಮರುದಿನ ಬೆಳ್ಳಿಗೆ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು.
ಭಾರತ್ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಅವರು ಬೆಂಗಳೂರು ಶಾಖೆಯಲ್ಲಿ ಸೇವೆಗೈಯ್ಯುತಿದ್ದರು. ಸಮಾಜ ಮುಖಿ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಮುಂಬಯಿ ಹಾಗೂ ಬೆಂಗಳೂರಿನ ಕೆಲವು ಸಂಘಟನೆಗಳಲ್ಲಿ ತೊಡಗಿಕೊಂಡು ಸೇವಾ ನಿರತರಾಗಿದ್ದರು.ಅವರು ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಎಂಬ ಸಂಸ್ಥೆಯ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಜನಪ್ರಿಯರಾಗಿದ್ದರು.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿರುವರು.

Related posts

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk