28 C
Mumbai
September 8, 2026
Mumbai News Kannada
ಕರಾವಳಿ

ಶ್ರೀ ದ್ವಾರಕಾಮಾಯಿ ಮಠ ಶಂಕರಪುರ : ಅರ್ಥಪೂರ್ಣವಾಗಿ ಜರಗಿದ ವಿಶ್ವ ಪ್ರಾಣಿ, ಪಕ್ಷಿಗಳ ಮೋಕ್ಷ ದಿನಾಚರಣೆ





ಶ್ರೀ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶ್ರೀ ಕ್ಷೇತ್ರ ಶಂಕರಪುರ ಇದರ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಕಾರ್ಯಕ್ರಮ ಮಾರ್ಚ್ 16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮೋಕ್ಷಕಟ್ಟೆಯಲ್ಲಿ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿದ ಶ್ರೀ ಸಾಯಿ ಈಶ್ವರ ಗುರೂಜಿ ಮುಂದಿನ ದಿನಗಳಲ್ಲಿ ಪ್ರಾಣಿ-ಪಕ್ಷಿಗಳ ಮೋಕ್ಷ ದಿನಾಚರಣೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಈ ದಿನಕ್ಕೆ ಮಾನ್ಯತೆ ದೊರೆಯುವಂತೆ ಸಂತ ಸಮಿತಿಯ ವತಿಯಿಂದ ಲೋಕಸಭಾ ಸದಸ್ಯರ ನೆರವಿನೊಂದಿಗೆ ಪ್ರಧಾನಿಗಳೊಂದಿಗೆ ಈ ಕುರಿತು ಚರ್ಚಿಸುವ ಉದ್ದೇಶವಿದೆ ಎಂದು ತಿಳಿಸಿದರು .
ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಕೂಡ ಆತ್ಮವಿದೆ ಈ ಆತ್ಮಕ್ಕೆ ಅವುಗಳು ಸತ್ತ ಬಳಿಕ ಮೋಕ್ಷ ದೊರಕುವ ನಿಟ್ಟಿನಲ್ಲಿ ಈ ರೀತಿಯ ವಿಭಿನ್ನವಾದ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ರಸ್ತೆ ಬದಿಯಲ್ಲಿ ಸತ್ತ ಪ್ರಾಣಿ ಪಕ್ಷಿಗಳನ್ನು ಮಣ್ಣು ಮಾಡುವ ಕಾಯಕವನ್ನು ಮಾಡುತ್ತಿರುವ ಅಜಯ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಸಾಮಾಜಿಕ ಮುಂದಾಳು ಸತೀಶ್ ವೇಣೂರು, ಮಹಿಳಾ ಸಂಚಾಲಕಿ ವಾರಿಜಾ ಕಲ್ಮಾಡಿ , ವಿಜಯ್ ಕುಂದರ್, ಸತೀಶ್ ದೇವಾಡಿಗ ,ವಿಘ್ನೇಶ್, ಸುಪ್ರೀತಾ, ಲಕ್ಷ್ಮಿ, ನೀಲೇಶ್ ಪ್ರದೀಪ್ ಮುಂತಾದವರಿದ್ದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು ಈ ಸಂದರ್ಭದಲ್ಲಿ ಮೋಕ್ಷ ಕಟ್ಟೆಯಲ್ಲಿ ಅಭಿಷೇಕ ನೆರವೇರಿಸಲಾಯಿತು.



Related posts

ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಕಾಯಕಲ್ಪ: ಶೀಘ್ರದಲ್ಲೇ ಕರಾವಳಿ ಭಾಗದಲ್ಲಿ ಸಚಿವ ಸಂಪುಟ ಸಭೆ – ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಕಾಪುವಿನ ಕರಸೇವಕರಿಗೆ ಗೌರವ

Mumbai News Desk