April 2, 2025
ಪ್ರಕಟಣೆ

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ



ಮೀರಾ ರೋಡ್ : ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಕರ ಶೆಟ್ಟಿಯವರ ನೇತೃತ್ವದಲ್ಲಿ ಪ್ರತೀ ವರ್ಷ ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಕೊಡಲ್ಪಡುವ ಧನ ಸಹಾಯವು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಮಾಜದ ಬಂಟ ಬಂಧುಗಳ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು,  ವಾರ್ಷಿಕ ವಿಧವಾ ವೇತನ,  ಮತ್ತು ಮಾನಸಿಕ ಅಸ್ವಸ್ಥೆಯಲ್ಲಿರುವ ಯಾ ವಿಕಲಾಂಗ ಚೇತನರಿಗೆ  ಆರ್ಥಿಕ ಧನ ಸಹಾಯ ವಿತರಣೆಯು ಜೂನ್  ತಿಂಗಳಲ್ಲಿ ನಡೆಯಲಿದೆ

ಈ ಪ್ರಯುಕ್ತ ಅರ್ಜಿ ವಿತರಣೆಯು ಬಂಟರ ಸಂಘ ಮುಂಬಯಿ ಇದರ  ಮೀರಾಭಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿಯವರ ಸಮಕ್ಷಮದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದ ಗುತ್ತು ಇವರ ಮುಂದಾಳತ್ವದಲ್ಲಿ ಇದೇ ಬರುವ ಮಾ. 23ರ ಶನಿವಾರದಂದು  

 ಹೋಟೆಲ್ ಕ್ರೌನ್ ಬಿಸಿನೆಸ್ , ಗೋಲ್ಡನ್ ನೆಸ್ಟ್ ಸರ್ಕಲ್ ಬಳಿ , ಮೀರಾ – ಭಾಯಂದರ್ ರೋಡ್ ಇಲ್ಲಿ ಸಂಜೆ 6:00 ರಿಂದ  ಗಂ. 7:00 ತನಕ  ನಡೆಯಲಿರುವುದು.

ಈ ಪ್ರಯುಕ್ತ 

ಇದರ ಲಾಭವನ್ನು ಪಡೆಯಲಿಚ್ಛಿಸುವ ಸಮಾಜ ಬಾಂಧವರು ಸಮಯಕ್ಕೆ ಸರಿಯಾಗಿ ಹಾಜರಿದ್ದು ಸಹಾಯ ಧನ ವಿತರಣೆಯ ಲಾಭವನ್ನು ಪಡೆದುಕೊಳ್ಳಬಹುದು. ಅರ್ಜಿಯನ್ನು ಪಡೆಯಲಿಚ್ಚಿಸುವ ಸಮಾಜ ಬಾಂಧವರು ತಮ್ಮ ಗುರುತು ಪತ್ರ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮನೆಯ ವಿದ್ಯುತ್ ಬಿಲ್ ಪ್ರತಿ, ಮಕ್ಕಳ ಇತ್ತೀಚಿನ ಶಾಲಾ ದಾಖಲೆ (ಮಾರ್ಕ್ಸ್ ಕಾರ್ಡ್), ಭಾವ ಚಿತ್ರ, ವಿಧವಾ ವೇತನ ಮತ್ತು ವಿಕಲಾಂಗ ಚೇತನದ ಲಾಭ ಪಡೆಯಲಿಚ್ಚಿಸುವ ಸಮಾಜ ಬಾಂಧವರು ಸಂಭಂದ ಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ಲಗ್ತೀಕರಿಸರಬೇಕು. ಅರ್ಜಿ ಪಡೆಯಲಿಚ್ಚಿಸುವ ಅರ್ಜಿದಾರರು ಬಂಟರ ಸಂಘ ಮುಂಬಯಿ ಇದರ ಸದಸ್ಯತ್ವವನ್ನು ಹೊಂದಿರಬೇಕು. ಮಾತ್ರವಲ್ಲದೆ ಸದಸ್ಯತನದ ಪ್ರತಿಯನ್ನು ಅರ್ಜಿಯಲ್ಲಿ ಲಗ್ತೀಕರಿಸ ತಕ್ಕದ್ದು. ಅರ್ಜಿಯನ್ನು ಕೇವಲ ವಿದ್ಯಾರ್ಥಿಗಳಿಗೆ, ವಿಧವೆಯವರಿಗೆ, ವಿಕಲಾಂಗ ಚೇತನರಿಗೆ ಸ್ವತಃ ಯಾ ಅವರವರ ಮಾತಾ ಪಿತೃರ ಯಾ ಪೋಷಕರಿಗೆ ಮಾತ್ರ ನೀಡಲಾಗುವುದು. 

ಹೆಚ್ಚಿನ ವಿವರಗಳಿಗಾಗಿ ಮೀರಾಭಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಕೊಟ್ರಪಾಡಿ ಗುತ್ತು ( 99673 25878) , ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದ ಗುತ್ತು ( 9223481670) ,  ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು (9819200707) ಇವರುಗಳನ್ನು ಸಂಪರ್ಕಿಸಬಹುದು.

Related posts

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ನ 25 ಕ್ಕೆ ಕರ್ನಾಟಕ ಮಿತ್ರ ಮಂಡಳಿ (ರಿ) ಕಲ್ಯಾಣ್ ನ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿ  ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ , ದತ್ತು ಸ್ವೀಕಾರ, ವಿಧವಾವೇತನ ,ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk