September 6, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ





ಮೀರಾ ರೋಡ್ : ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಕರ ಶೆಟ್ಟಿಯವರ ನೇತೃತ್ವದಲ್ಲಿ ಪ್ರತೀ ವರ್ಷ ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಕೊಡಲ್ಪಡುವ ಧನ ಸಹಾಯವು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಮಾಜದ ಬಂಟ ಬಂಧುಗಳ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು,  ವಾರ್ಷಿಕ ವಿಧವಾ ವೇತನ,  ಮತ್ತು ಮಾನಸಿಕ ಅಸ್ವಸ್ಥೆಯಲ್ಲಿರುವ ಯಾ ವಿಕಲಾಂಗ ಚೇತನರಿಗೆ  ಆರ್ಥಿಕ ಧನ ಸಹಾಯ ವಿತರಣೆಯು ಜೂನ್  ತಿಂಗಳಲ್ಲಿ ನಡೆಯಲಿದೆ

ಈ ಪ್ರಯುಕ್ತ ಅರ್ಜಿ ವಿತರಣೆಯು ಬಂಟರ ಸಂಘ ಮುಂಬಯಿ ಇದರ  ಮೀರಾಭಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿಯವರ ಸಮಕ್ಷಮದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದ ಗುತ್ತು ಇವರ ಮುಂದಾಳತ್ವದಲ್ಲಿ ಇದೇ ಬರುವ ಮಾ. 23ರ ಶನಿವಾರದಂದು  

 ಹೋಟೆಲ್ ಕ್ರೌನ್ ಬಿಸಿನೆಸ್ , ಗೋಲ್ಡನ್ ನೆಸ್ಟ್ ಸರ್ಕಲ್ ಬಳಿ , ಮೀರಾ – ಭಾಯಂದರ್ ರೋಡ್ ಇಲ್ಲಿ ಸಂಜೆ 6:00 ರಿಂದ  ಗಂ. 7:00 ತನಕ  ನಡೆಯಲಿರುವುದು.

ಈ ಪ್ರಯುಕ್ತ 

ಇದರ ಲಾಭವನ್ನು ಪಡೆಯಲಿಚ್ಛಿಸುವ ಸಮಾಜ ಬಾಂಧವರು ಸಮಯಕ್ಕೆ ಸರಿಯಾಗಿ ಹಾಜರಿದ್ದು ಸಹಾಯ ಧನ ವಿತರಣೆಯ ಲಾಭವನ್ನು ಪಡೆದುಕೊಳ್ಳಬಹುದು. ಅರ್ಜಿಯನ್ನು ಪಡೆಯಲಿಚ್ಚಿಸುವ ಸಮಾಜ ಬಾಂಧವರು ತಮ್ಮ ಗುರುತು ಪತ್ರ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮನೆಯ ವಿದ್ಯುತ್ ಬಿಲ್ ಪ್ರತಿ, ಮಕ್ಕಳ ಇತ್ತೀಚಿನ ಶಾಲಾ ದಾಖಲೆ (ಮಾರ್ಕ್ಸ್ ಕಾರ್ಡ್), ಭಾವ ಚಿತ್ರ, ವಿಧವಾ ವೇತನ ಮತ್ತು ವಿಕಲಾಂಗ ಚೇತನದ ಲಾಭ ಪಡೆಯಲಿಚ್ಚಿಸುವ ಸಮಾಜ ಬಾಂಧವರು ಸಂಭಂದ ಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ಲಗ್ತೀಕರಿಸರಬೇಕು. ಅರ್ಜಿ ಪಡೆಯಲಿಚ್ಚಿಸುವ ಅರ್ಜಿದಾರರು ಬಂಟರ ಸಂಘ ಮುಂಬಯಿ ಇದರ ಸದಸ್ಯತ್ವವನ್ನು ಹೊಂದಿರಬೇಕು. ಮಾತ್ರವಲ್ಲದೆ ಸದಸ್ಯತನದ ಪ್ರತಿಯನ್ನು ಅರ್ಜಿಯಲ್ಲಿ ಲಗ್ತೀಕರಿಸ ತಕ್ಕದ್ದು. ಅರ್ಜಿಯನ್ನು ಕೇವಲ ವಿದ್ಯಾರ್ಥಿಗಳಿಗೆ, ವಿಧವೆಯವರಿಗೆ, ವಿಕಲಾಂಗ ಚೇತನರಿಗೆ ಸ್ವತಃ ಯಾ ಅವರವರ ಮಾತಾ ಪಿತೃರ ಯಾ ಪೋಷಕರಿಗೆ ಮಾತ್ರ ನೀಡಲಾಗುವುದು. 

ಹೆಚ್ಚಿನ ವಿವರಗಳಿಗಾಗಿ ಮೀರಾಭಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಕೊಟ್ರಪಾಡಿ ಗುತ್ತು ( 99673 25878) , ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಸಂಪತ್ ಶೆಟ್ಟಿ ಪಂಜದ ಗುತ್ತು ( 9223481670) ,  ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು (9819200707) ಇವರುಗಳನ್ನು ಸಂಪರ್ಕಿಸಬಹುದು.



Related posts

ಕನ್ಯಾನ ಸದಾಶಿವ ಶೆಟ್ಟಿ ಅಭಿಮಾನಿ ಬಳಗ. ಪೆ 8:ಮೀಂಜ ಬಂಟರ ಸಂಘ ಮೈದಾನದಲ್ಲಿ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ,

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜುಲೈ 11ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ

Mumbai News Desk

ಆಗಸ್ಟ್ 30 : ಮುಂಬೈನಲ್ಲಿ “ಸನಾತನ ಸಮ್ಮೇಳನ”: ಧರ್ಮ, ಸಂಸ್ಕೃತಿ ಮತ್ತು ಮೌಲ್ಯಗಳ ಜಾಗೃತಿಗೆ ಆಹ್ವಾನ

Mumbai News Desk

ಮಾ. 22: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk