April 1, 2025
ಪ್ರಕಟಣೆ

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

    ಮೊಗವೀರ ಸಮಾಜದ ಬಂಧುಗಳು ಸ್ಥಾಪಿಸಿರುವ ಅಂಧೇರಿ  ಪಶ್ಚಿಮ ದ  ಶ್ರೀ ಮದ್ಭಾರತ ಮಂಡಳಿಯ ಆಡಳಿತದ ಶ್ರೀ ಲಕ್ಷ್ಮಿ ನಾರಾಯಣ ಮಂದಿರದ22ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಮಾ-29ನೇ ಶುಕ್ರವಾರದಂದು. ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂದಿರದ ಪ್ರಧಾನ ಅರ್ಚಕರಾದ ಗುರುಪ್ರಸಾದ್ ಭಟ್ ಅವರ ಮಾರ್ಗದರ್ಶನ ದಲ್ಲಿ ವಿಜ್ರಂಭಣೆಯಿಂದ ಜರಗಲಿರುವುದು.

ಬೆಳಿಗ್ಗೆ ಗಂಟೆ 8:30 ರಿಂದ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾ ಹ ವಾಚನ, ಪ್ರಧಾನ ಹೋಮ, ನವ ಕಲಶ ಪೂಜೆ, ಪರಿವಾರ ಸಹಿತ ಶ್ರೀ ಲಕ್ಷ್ಮಿನಾರಾಯಣ ದೇವರಿಗೆ ಪಂಚಾಮೃತ ಮತ್ತು ಕಲಶಭಿಷೇಕ, ಮಹಾಪೂಜೆ, ತದನಂತರ ದೇವರ ಬಲಿ ಮೂರ್ತಿಯ ಉತ್ಸವ  ಬಲಿ ನಡೆಯಲಿರುವುದು,ಬೆಳಿಗ್ಗೆ 10 ರಿಂದ 11ರ ತನಕ  ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿ ಅಂಧೇರಿ ಮತ್ತು ಮಹಿಷಮರ್ದಿನಿ ಭಜನಾ ಮಂಡಳಿ, ಬೊರಿವಲಿ ಇವರಿಂದ ಕುಣಿತ ಭಜನೆ. 12ರಿಂದ  3 ರ ವರೆಗೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ,

ಮಧ್ಯಾಹ್ನ 2ರಿಂದ 5.30ರ ತನಕ   ಪುಷ್ಪ ಜಿ. ಬಂಗೇರ ಅವರಿಂದ ‘ಶ್ರೀ ಕೃಷ್ಣ ಬಾಲ ಲೀಲೆ ‘ ಹರಿಕಥೆ, ಸಂಜೆ4 ರಿಂದ 5 30ರ ವರೆಗೆ ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ  ಬೋರಿವಲಿ,5 30 ರಿಂದ 6 30 ರ ವರೆಗೆ ಶ್ರೀ ಮಧ್ಭಾರತ  ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ. ರಾತ್ರಿ 6.30ಕ್ಕೆ  ಮಂಟಪ ರಂಗ ಪೂಜೆ ನಡೆಯಲಿದೆ,

 ದೇವರ ಸನ್ನಿಧಿಯಲ್ಲಿ ಜರಗಲಿರುವುದು.ಈ ಶುಭ ಸಮಾರಂಭದಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಅನುಗ್ರಹಕ್ಕೆ ಪಾತ್ರ ರಾಗಬೇಕೆಂದು ಮಂಡಳಿ ಅಧ್ಯಕ್ಷ ಜಗನ್ನಾಥ್ ಪಿ. ಪುತ್ರನ್ ಮತ್ತು ಪ್ರಧಾನ ಕಾರ್ಯದರ್ಶಿ  ಲೋಕನಾಥ್ ಪಿ. ಕಾಂಚನ್, ಕೋಶಾಧಿಕಾರಿ ಕೇಶವ್ ಪುತ್ರನ್ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ

Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ಜ 5:೮೪ ನೇ ವಾರ್ಷಿಕ ಮಿಲನ ‘ಸಾಫಲ್ಯ -೨೦೨೫’ 

Mumbai News Desk

     ಜೂ  ೧೬ :  ಶನಿ ಮಹಾತ್ಮ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ

Mumbai News Desk

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

Mumbai News Desk