32 C
Mumbai
March 7, 2026
Mumbai News Kannada
ಮುಂಬಯಿ

ಬಿ. ಎಸ್. ಕೆ. ಬಿ. ಎಸೋಸಿಯೇಶನ್, ಗೋಕುಲ, ಮಹಿಳಾ ದಿನಾಚರಣೆ





 

ಬಿ. ಎಸ್. ಕೆ. ಬಿ. ಎಸೋಸಿಯೇಶನ್, ಗೋಕುಲ,ಮಹಿಳಾ ವಿಭಾಗವು  ಮಹಿಳಾ ದಿನಾಚರಣೆಯನ್ನು ಶನಿವಾರ ದಿನಾಂಕ ೩೦. ೩. ೨೦೨೪ ರಂದು ಮಹಿಳಾ ವಿಭಾಗದ ಅಧ್ಯಕ್ಷೆ ಡಾ. ಸಹನಾ ಪೋತಿಯವರ ನೇತೃತ್ವದಲ್ಲಿ ವೈವಿಧ್ಯಮಯ  ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ  ಅತ್ಯಂತ ಸಂಭ್ರಮದಿಂದ ಆಚರಿಸಿತು. 

ಸಾಹಿತ್ಯಿಕ ಕಾರ್ಯಕ್ರಮದ ಅಂಗವಾಗಿ “ಭಾರತೀಯ ನಾರಿ” ವಿಷಯಾಧಾರಿತ ಪ್ರಬಂಧ ಬರೆಯುವುದರಲ್ಲಿ ಸುಮಾರು ೧೫ ಮಹಿಳೆಯರು/ಪುರುಷರು   ತಮ್ಮ ಅನಿಸಿಕೆಗಳನ್ನು ಲೇಖನದ ಮೂಲಕ ವ್ಯಕ್ತ ಪಡಿಸಿದರು. 

 ಪ್ರೇಮಾ ರಾವ್ ಆಗಮಿಸಿದ ಸದಸ್ಯರನ್ನೆಲ್ಲಾ   ಸ್ವಾಗತಿಸಿದ ಬಳಿಕ ಸಂಘದ   ಹಿರಿಯ ಸದಸ್ಯೆ ದ್ರೌಪದಿಯವರು ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು.  ನಂತರ ನಡೆದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಮಹಿಳೆಯರು ಸಂಗೀತ, ನೃತ್ಯ, ಯೋಗ ನೃತ್ಯ, ಯೋಗ ಪ್ರದರ್ಶನ, ಚಿತ್ರ ಕಲೆ, ಏಕ ವ್ಯಕ್ತಿ ಅಭಿನಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಪ್ರಶಾಂತ್ ಹೆರ್ಲೆಯವರು,    ಸದಸ್ಯರಿಗೆ  ವಿವಿಧ ಮೋಜಿನ ಆಟಗಳನ್ನು  ಏರ್ಪಡಿಸಿ ಮನರಂಜಿಸಿದರು. ವಿಠಲ ಭಜನಾ ಮಂಡಳಿ, ಮೀರಾ ರೋಡ್  ಸದಸ್ಯೆಯರಿಂದ ಹಾಸ್ಯ ಹರಟೆ, ಗೋಕುಲದ ಮಹಿಳಾ ವಿಭಾಗದವರಿಂದ  “ಕಟ್ಟೆ ಪುರಾಣ” ಎಂಬ ಹಾಸ್ಯಮಯ ಕಿರು ಪ್ರಹಸನ, ಡೆನ್ನನ ನೃತ್ಯ ಇತ್ಯಾದಿ ಮನರಂಜನಾ ಕಾರ್ಯಕ್ರಮಗಳು ನೆರವೇರಿದವು.  ಮಹಿಳಾ ವಿಭಾಗದ ಸಂಚಾಲಕಿ ಸ್ಮಿತಾ ಭಟ್ ಕಾರ್ಯಕ್ರಮ ನಿರೂಪಿಸಿದರು.ಪ್ರೇಮಾ ರಾವ್  ಧನ್ಯವಾದ ಸಮರ್ಪಣೆ ಗೈದರು. ಅಧ್ಯಕ್ಷರು ಡಾ. ಸುರೇಶ್ ರಾವ್,ಗೌ. ಕಾರ್ಯದರ್ಶಿ ಎ.ಪಿ.ಕೆ. ಪೋತಿ, ಕೋಶಾಧಿಕಾರಿ, ಹರಿದಾಸ್ ಭಟ್, ಜತೆ ಕಾರ್ಯದರ್ಶಿ ವೈ. ಮೋಹನ್ ರಾಜ್, ಕಾರ್ಯಕಾರಿ ಸಮಿತಿ ಸದಸ್ಯರು, ಸಂಘದ ಪ್ರಥಮ ಮಹಿಳೆ ವಿಜಯಲಕ್ಷ್ಮಿ ಸುರೇಶ್ ರಾವ್ , ಗೋಪಾಲಕೃಷ್ಣ ಪಬ್ಲಿಕ್  ಟ್ರಸ್ಟ್  ವಿಶ್ವಸ್ಥ ಮಂಡಳಿ ಸದಸ್ಯೆ ಶೈಲಿನಿ ರಾವ್  ಸಹಿತ   ಸುಮಾರು ೧೩೦ ಮಿಕ್ಕಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.   

ಪ್ರೀತಿ ಭೋಜನದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು



Related posts

ಮುಂಬೈ ‘ಎನ್ಕೌಂಟರ್ ಸ್ಪೆಶಲಿಸ್ಟ್’ ದಯಾ ನಾಯಕ್ ನಿವೃತ್ತಿಗೆ ಎರಡು ದಿನಗಳ ಮೊದಲು ಎಸಿಪಿ ಹುದ್ದೆಗೆ ಬಡ್ತಿ

Mumbai News Desk

ಇಲ್ಲಿ ಸ್ಥಳದ ಅಭಾವ ಇದೆ ಅದರೆ  ಶ್ರೀ ದುರ್ಗೆ ಯನ್ನು ಪೂಜಿಸಲು ಭಕ್ತರ  ಅಭಾವಿಲ್ಲ – ಪ್ರಭಾಕರ್ ಶೆಟ್ಟಿ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಅದ್ಧೂರಿ ಕ್ರೀಡಾ ಕೂಟ ದಂಗಲ್ 2024 ಸಮಾರೋಪ ಸಮಾರಂಭ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಯಿ ಇವರ ವತಿಯಿಂದ ಅರಿಶಿನ ಕುಂಕುಮ ಹಾಗೂ  ವಾರ್ಷಿಕ ಸಭೆ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ 75ನೇ ಪ್ರಜಾಪ್ರಭುತ್ವ ದಿನಾಚರಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಸೆ. 5 ರಂದು ಜರಗಿದ 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕದ ಸ್ಪೀಕರ್ ಯು. ಟಿ. ಖಾದರ್ ಅವರ ಮನದಾಳದ ನುಡಿ

Mumbai News Desk