32 C
Mumbai
March 7, 2026
Mumbai News Kannada
ಪ್ರಕಟಣೆ

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ





ಮುಂಬೈ : 15.04.2024
   ಮುಂಬೈ ಸಾರಸ್ವತರ ಅತೀ ಹಿರಿಯ ಸಂಸ್ಥೆಯಾದ ರಾಜಾಪುರ ಸಾರಸ್ವತ ಸಂಘ (ರಿ) ವು ತನ್ನ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ಇದೇ ಬುಧವಾರ ತಾ.17 ನೆಯ ಎಪ್ರಿಲ್ 2024 ರಂದು ತನ್ನ 75 ನೆಯ ವರ್ಷಾಚರಣೆಯು ಚಾಲನೆಗೊಳ್ಳಲಿದೆ.
  ಪ್ರಾತಃಕಾಲ 7 ಗಂಟೆಗೆ  ಪರೇಲ್ ನ ಸ್ವಂತ  ಕಟ್ಟಡದಲ್ಲಿ ಶ್ರೀ ಗಣಪತಿ ಹೋಮ ಆನಂತರ 10.30 ಕ್ಕೆ ಸಯಾನ್ ಪೂರ್ವದ ಜಿ ಎಸ್ ಬಿ ಸೇವಾಮಂಡಲದ ಸಭಾಭಾವನದಲ್ಲಿ ಶ್ರೀ ಸತ್ಯನಾರಾಯಣ ಮಹಾ ಪೂಜೆ ಹಾಗೂ ಚೈತ್ರಗೌರೀ ಅರಶಿನ ಕುಂಕುಮ ಕಾರ್ಯಕ್ರಮವಿರುವುದು.
  ಅಪರಾಹ್ನ 2 ಗಂಟೆಗೆ ಸಭಾಕಾರ್ಯಕ್ರಮವಿದ್ದು 75 ನೆಯ ವರ್ಷಾಚರಣೆಯ ಕಾರ್ಯಕ್ರಮಗಳ ವಿದ್ಯುಕ್ತ ಉದ್ಘಾಟನೆ ಜರಗಲಿರುವುದು. ಮುಖ್ಯ ಅತಿಥಿಗಳಾಗಿ ಬೆಂಗಳೂರು ರಾಜಾಪುರ ಸಾರಸ್ವತ ಸಂಘದ ಅಧ್ಯಕ್ಷ ಡಿ. ನಾಗೇಂದ್ರ ಕಾಮತ್ , ಪದ್ಮಶ್ರೀ ಎಚ್.ಸದಾನಂದ ಕಾಮತ್ ಹಾಗೂ ಮುಂಬೈ ಸಂಘದ ಮಾಜಿ ಅಧ್ಯಕ್ಷ ಮಾಧವ ವಿ. ಪ್ರಭು ಉಪಸ್ಥಿತರಿರುವರು.
   ದೂರದೃಷ್ಟಿಯುಳ್ಳ ಸಮಾಜದ ಹಿರಿಯರು 1950 ನೆಯ ಇಸವಿ ಮಾರ್ಚ್ ತಾ.15 ರ ರಾಮ ನವಮಿಯಂದು  ಈ ಸಂಸ್ಥೆಯನ್ನು ಹುಟ್ಟುಹಾಕಿದ್ದು ವಿವಿಧ ಸಮಾಜಪರ ಕಾರ್ಯಕ್ರಮಗಳನ್ನು ಜರಗಿಸಿಕೊಂಡು  ಬರುತ್ತಾ ಇದೀಗ ಜರಗುವ 75 ವರ್ಷಾಚರಣೆಯ ಆರಂಭೋತ್ಸವಕ್ಕೆ ಮಹಾರಾಷ್ಟ್ರದಾದ್ಯಂತ ಇರುವ ಸಮಾಜ ಸದಸ್ಯ ಬಂಧುಗಳೆಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸ ಬೇಕಾಗಿ ಅಧ್ಯಕ್ಷ ರಾಮಚಂದ್ರ ಎಸ್. ನಾಯಕ್ , ಕಾರ್ಯದರ್ಶಿ ರಮೇಶ ಯು.ಕಾಮತ್ ಹಾಗೂ ಖಜಾಂಚಿ ಅನಿಲ್ ಪಿ. ನಾಯಕ್ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
ಮಾಧ್ಯಮ ಸುದ್ಧಿ : ಪಿ.ಆರ್.ರವಿಶಂಕರ್ ಮುಂಬೈ 8483980035



Related posts

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

     ಜೂ  ೧೬ :  ಶನಿ ಮಹಾತ್ಮ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ

Mumbai News Desk

ನ 25 ಕ್ಕೆ ಕರ್ನಾಟಕ ಮಿತ್ರ ಮಂಡಳಿ (ರಿ) ಕಲ್ಯಾಣ್ ನ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಎ. 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk

ಡಿ.24 : ಚಂದ್ರಹಾಸ ಗುರುಸ್ವಾಮಿ ಇನ್ನಂಜೆಯವರ ಶ್ರೀ ಅಯ್ಯಪ್ಪ ಭಕ್ತವೃಂದದ 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ, ಅನ್ನ ಸಂತರ್ಪಣೆ.

Mumbai News Desk