30 C
Mumbai
April 24, 2026
Mumbai News Kannada
ಪ್ರಕಟಣೆ

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ





ಮುಂಬೈ : 15.04.2024
   ಮುಂಬೈ ಸಾರಸ್ವತರ ಅತೀ ಹಿರಿಯ ಸಂಸ್ಥೆಯಾದ ರಾಜಾಪುರ ಸಾರಸ್ವತ ಸಂಘ (ರಿ) ವು ತನ್ನ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ಇದೇ ಬುಧವಾರ ತಾ.17 ನೆಯ ಎಪ್ರಿಲ್ 2024 ರಂದು ತನ್ನ 75 ನೆಯ ವರ್ಷಾಚರಣೆಯು ಚಾಲನೆಗೊಳ್ಳಲಿದೆ.
  ಪ್ರಾತಃಕಾಲ 7 ಗಂಟೆಗೆ  ಪರೇಲ್ ನ ಸ್ವಂತ  ಕಟ್ಟಡದಲ್ಲಿ ಶ್ರೀ ಗಣಪತಿ ಹೋಮ ಆನಂತರ 10.30 ಕ್ಕೆ ಸಯಾನ್ ಪೂರ್ವದ ಜಿ ಎಸ್ ಬಿ ಸೇವಾಮಂಡಲದ ಸಭಾಭಾವನದಲ್ಲಿ ಶ್ರೀ ಸತ್ಯನಾರಾಯಣ ಮಹಾ ಪೂಜೆ ಹಾಗೂ ಚೈತ್ರಗೌರೀ ಅರಶಿನ ಕುಂಕುಮ ಕಾರ್ಯಕ್ರಮವಿರುವುದು.
  ಅಪರಾಹ್ನ 2 ಗಂಟೆಗೆ ಸಭಾಕಾರ್ಯಕ್ರಮವಿದ್ದು 75 ನೆಯ ವರ್ಷಾಚರಣೆಯ ಕಾರ್ಯಕ್ರಮಗಳ ವಿದ್ಯುಕ್ತ ಉದ್ಘಾಟನೆ ಜರಗಲಿರುವುದು. ಮುಖ್ಯ ಅತಿಥಿಗಳಾಗಿ ಬೆಂಗಳೂರು ರಾಜಾಪುರ ಸಾರಸ್ವತ ಸಂಘದ ಅಧ್ಯಕ್ಷ ಡಿ. ನಾಗೇಂದ್ರ ಕಾಮತ್ , ಪದ್ಮಶ್ರೀ ಎಚ್.ಸದಾನಂದ ಕಾಮತ್ ಹಾಗೂ ಮುಂಬೈ ಸಂಘದ ಮಾಜಿ ಅಧ್ಯಕ್ಷ ಮಾಧವ ವಿ. ಪ್ರಭು ಉಪಸ್ಥಿತರಿರುವರು.
   ದೂರದೃಷ್ಟಿಯುಳ್ಳ ಸಮಾಜದ ಹಿರಿಯರು 1950 ನೆಯ ಇಸವಿ ಮಾರ್ಚ್ ತಾ.15 ರ ರಾಮ ನವಮಿಯಂದು  ಈ ಸಂಸ್ಥೆಯನ್ನು ಹುಟ್ಟುಹಾಕಿದ್ದು ವಿವಿಧ ಸಮಾಜಪರ ಕಾರ್ಯಕ್ರಮಗಳನ್ನು ಜರಗಿಸಿಕೊಂಡು  ಬರುತ್ತಾ ಇದೀಗ ಜರಗುವ 75 ವರ್ಷಾಚರಣೆಯ ಆರಂಭೋತ್ಸವಕ್ಕೆ ಮಹಾರಾಷ್ಟ್ರದಾದ್ಯಂತ ಇರುವ ಸಮಾಜ ಸದಸ್ಯ ಬಂಧುಗಳೆಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸ ಬೇಕಾಗಿ ಅಧ್ಯಕ್ಷ ರಾಮಚಂದ್ರ ಎಸ್. ನಾಯಕ್ , ಕಾರ್ಯದರ್ಶಿ ರಮೇಶ ಯು.ಕಾಮತ್ ಹಾಗೂ ಖಜಾಂಚಿ ಅನಿಲ್ ಪಿ. ನಾಯಕ್ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
ಮಾಧ್ಯಮ ಸುದ್ಧಿ : ಪಿ.ಆರ್.ರವಿಶಂಕರ್ ಮುಂಬೈ 8483980035



Related posts

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಏಪ್ರಿಲ್ 1 ರಿಂದ 8 ರವರೆಗೆ ಜಾತ್ರೆ; ಏಪ್ರಿಲ್ 7 ರಂದು ರಥೋತ್ಸವ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಎ. 27ಕ್ಕೆ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk