July 23, 2026
Mumbai News Kannada
ಮುಂಬಯಿ

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ







ಚಿತ್ರ ವರದಿ ದಿನೇಶ್ ಕುಲಾಲ್ 

ಮಲಾಡ್ ಪೂರ್ವ ಕುರಾರ್‌ ವಿಲೇಜ್‌ನ ಜಾನ್ ಕಂಪೌಂಡ್‌ನಲ್ಲಿರುವ ಶ್ರೀದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಎಂ,13 ರಂದು ಶನಿವಾರ  ವಾರ್ಷಿಕ ಮಹೋತ್ಸವ ಅಂಗವಾಗಿ ಬೆಳಿಗ್ಗೆನಿಂದ ರಾತ್ರಿವರೆಗೆ ವಿಶೇಷ ಪೂಜೆಗಳುಮತ್ತು ಪಾಲ್ಕಿ ಉತ್ಸವ,ಮಹಾಪೂಜೆ ದೇವಸ್ಥಾದ ಧರ್ಮದರ್ಶಿ ರವಿ ಸ್ವಾಮೀಜಿ ನಡೆಸಿದರು,

ಅಂದು ಬೆಳಿಗ್ಗೆ  ಗಣಹೋಮ, ನವಕ ಪ್ರಧಾನ ಹೋಮ ಪಂಚಾಮೃತ ಅಭಿಷೇಕ ನವ ಕಳಸ ಅಭಿಷೇಕ ಅಲಂಕಾರ ಪೂಜೆ ಮಧ್ಯಾಹ್ನ ಮಹಾಪೂಜೆ ಮಹಾಮಂಗಳಾರತಿ ದೇವಿ ಆವೇಶ ಆ ಬಳಿಕ ತೀರ್ಥ ಪ್ರಸಾದ ನಡೆಯಿತು,

, ಸಂಜೆ  ಕುಂಕುಮಾರ್ಚನೆ ಸೇವೆ   ಆ ಬಳಿಕ ಬಲಿ ಮೂರ್ತಿಯೊಂದಿಗೆ ಪಾಲ್ಕಿ ಮೆರವಣಿಗೆ ದಿನೇಶ್ ಕೋಟ್ಯಾನ್ ಬಳಗದ ಕೊಂಬು ವಾದ್ಯ ಗಳು ,ಯಕ್ಷಗಾನದ ವೇಷ ಭೂಷಣಗಳೊಂದಿಗೆ  ಕುರಾರ್ ವಿಲೇಜ್ ಸುತ್ತ ಮೆರವಣಿಗೆ ಸಾಗಿ ಬಂತು , ರಾತ್ರಿ ಮಹಾ ಮಂಗಳಾರತಿ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.

 ಪೂಜಾ ಕಾರ್ಯ ಸುಸಂಗವಾಗಿ ನಡೆಯಲು ಮಹಮ್ಮಾಯಿ ಸೇವಾ ಸಮಿತಿಯ ಗೌ.ಅಧ್ಯಕ್ಷ ಸಂತೋಷ್ ಕೆ. ಪೂಜಾರಿ, , ಉಪಾಧ್ಯಕ್ಷೆ ಆಶಾ  ಪೂಜಾರಿ, ಗೌ.ಪ್ರ. ಕಾರ್ಯದರ್ಶಿ ಶೇಖರ್ ಡಿ. ಅಮೀನ್ , ಜೊತೆ ಕಾರ್ಯದರ್ಶಿ ಉದಯ ಬಿ. ಸಾಲ್ಯಾನ್, ಕೋಶಾಧಿಕಾರಿ ರಾಜು ಪೂಜಾರಿ, ಜೊತೆ ಕೋಶಾಧಿಕಾರಿ ಶ್ರೀಧರ್ ಪಾಟ್ಕರ್ , ಸಲಗರದ ಸುರೇಂದ್ರ ಶೆಟ್ಟಿ ಹೊಸ್ಮರು , ಚಂದ್ರಶೇಖರ್ ಶೆಟ್ಟಿ. ಕೊಕ್ಕರಣೆ,  ಮಹಿಳಾ ವಿಭಾಗದ ಸದಸ್ಯರು ಕಾರ್ಯಕಾರಿ ಸಮಿತಿಯ ಸದಸ್ಯರು ಪೂಜಾ ಸಮಿತಿಯ ಸದಸ್ಯರು ಹಾಗೂ ಸರ್ವ ಸದಸ್ಯರು ಸಹಕರಿಸಿದರು, 

ಪೂಜೆಯಲ್ಲಿ ಮಲಾಡಿನ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು , ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು



Related posts

ಬಿಲ್ಲವರ ಅಸೋಸಿಯೇಶನ್ ಮೀರಾ ರೋಡ್ ಸ್ಥಳೀಯ ಕಚೇರಿಯಿಂದ ಅದ್ಧೂರಿ ಸ್ನೇಹ ಸಮ್ಮಿಲನ;

Mumbai News Desk

ಮುಂಬೈ ‘ಎನ್ಕೌಂಟರ್ ಸ್ಪೆಶಲಿಸ್ಟ್’ ದಯಾ ನಾಯಕ್ ನಿವೃತ್ತಿಗೆ ಎರಡು ದಿನಗಳ ಮೊದಲು ಎಸಿಪಿ ಹುದ್ದೆಗೆ ಬಡ್ತಿ

Mumbai News Desk

ಬಿ. ಎಸ್. ಕೆ. ಬಿ. ಎಸೋಸಿಯೇಶನ್, ಗೋಕುಲ, ಮಹಿಳಾ ದಿನಾಚರಣೆ

Mumbai News Desk

ಕನ್ನಡ ಕಲಾ ಸಮಾಜ ಕೋಟೆ ಮುಂಬಯಿ : ವಾರ್ಷಿಕ ಸ್ನೇಹ ಸಮ್ಮಿಲನ ಒಕ್ಕೂಟ ಸಭೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ :-

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕೋಪರಖೈರನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ 46ನೇ ಸಂಸ್ಥಾಪನಾ ದಿನಾಚರಣೆ

Mumbai News Desk