30.9 C
Mumbai
June 8, 2026
Mumbai News Kannada
ಮುಂಬಯಿ

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ





ಚಿತ್ರ ವರದಿ ದಿನೇಶ್ ಕುಲಾಲ್ 

ಮಲಾಡ್ ಪೂರ್ವ ಕುರಾರ್‌ ವಿಲೇಜ್‌ನ ಜಾನ್ ಕಂಪೌಂಡ್‌ನಲ್ಲಿರುವ ಶ್ರೀದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಎಂ,13 ರಂದು ಶನಿವಾರ  ವಾರ್ಷಿಕ ಮಹೋತ್ಸವ ಅಂಗವಾಗಿ ಬೆಳಿಗ್ಗೆನಿಂದ ರಾತ್ರಿವರೆಗೆ ವಿಶೇಷ ಪೂಜೆಗಳುಮತ್ತು ಪಾಲ್ಕಿ ಉತ್ಸವ,ಮಹಾಪೂಜೆ ದೇವಸ್ಥಾದ ಧರ್ಮದರ್ಶಿ ರವಿ ಸ್ವಾಮೀಜಿ ನಡೆಸಿದರು,

ಅಂದು ಬೆಳಿಗ್ಗೆ  ಗಣಹೋಮ, ನವಕ ಪ್ರಧಾನ ಹೋಮ ಪಂಚಾಮೃತ ಅಭಿಷೇಕ ನವ ಕಳಸ ಅಭಿಷೇಕ ಅಲಂಕಾರ ಪೂಜೆ ಮಧ್ಯಾಹ್ನ ಮಹಾಪೂಜೆ ಮಹಾಮಂಗಳಾರತಿ ದೇವಿ ಆವೇಶ ಆ ಬಳಿಕ ತೀರ್ಥ ಪ್ರಸಾದ ನಡೆಯಿತು,

, ಸಂಜೆ  ಕುಂಕುಮಾರ್ಚನೆ ಸೇವೆ   ಆ ಬಳಿಕ ಬಲಿ ಮೂರ್ತಿಯೊಂದಿಗೆ ಪಾಲ್ಕಿ ಮೆರವಣಿಗೆ ದಿನೇಶ್ ಕೋಟ್ಯಾನ್ ಬಳಗದ ಕೊಂಬು ವಾದ್ಯ ಗಳು ,ಯಕ್ಷಗಾನದ ವೇಷ ಭೂಷಣಗಳೊಂದಿಗೆ  ಕುರಾರ್ ವಿಲೇಜ್ ಸುತ್ತ ಮೆರವಣಿಗೆ ಸಾಗಿ ಬಂತು , ರಾತ್ರಿ ಮಹಾ ಮಂಗಳಾರತಿ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.

 ಪೂಜಾ ಕಾರ್ಯ ಸುಸಂಗವಾಗಿ ನಡೆಯಲು ಮಹಮ್ಮಾಯಿ ಸೇವಾ ಸಮಿತಿಯ ಗೌ.ಅಧ್ಯಕ್ಷ ಸಂತೋಷ್ ಕೆ. ಪೂಜಾರಿ, , ಉಪಾಧ್ಯಕ್ಷೆ ಆಶಾ  ಪೂಜಾರಿ, ಗೌ.ಪ್ರ. ಕಾರ್ಯದರ್ಶಿ ಶೇಖರ್ ಡಿ. ಅಮೀನ್ , ಜೊತೆ ಕಾರ್ಯದರ್ಶಿ ಉದಯ ಬಿ. ಸಾಲ್ಯಾನ್, ಕೋಶಾಧಿಕಾರಿ ರಾಜು ಪೂಜಾರಿ, ಜೊತೆ ಕೋಶಾಧಿಕಾರಿ ಶ್ರೀಧರ್ ಪಾಟ್ಕರ್ , ಸಲಗರದ ಸುರೇಂದ್ರ ಶೆಟ್ಟಿ ಹೊಸ್ಮರು , ಚಂದ್ರಶೇಖರ್ ಶೆಟ್ಟಿ. ಕೊಕ್ಕರಣೆ,  ಮಹಿಳಾ ವಿಭಾಗದ ಸದಸ್ಯರು ಕಾರ್ಯಕಾರಿ ಸಮಿತಿಯ ಸದಸ್ಯರು ಪೂಜಾ ಸಮಿತಿಯ ಸದಸ್ಯರು ಹಾಗೂ ಸರ್ವ ಸದಸ್ಯರು ಸಹಕರಿಸಿದರು, 

ಪೂಜೆಯಲ್ಲಿ ಮಲಾಡಿನ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು , ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು



Related posts

ಬಹುಮುಖ ಪ್ರತಿಭೆ ಕು. ಪ್ರಿಷಾ ಜಿತೇಂದ್ರ ಕೋಟ್ಯಾನ್ ಅವರ ಭರತನಾಟ್ಯ ರಂಗಪ್ರವೇಶ

Mumbai News Desk

ಭಾಯಂದರ್ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ನ 19ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ – ಆಷಾಢ ಹಬ್ಬ ಆಚರಣೆ,

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಚರಣೆ

Mumbai News Desk

ಸ್ವಾಮಿ ನಿತ್ಯಾನಂದಮಂದಿರ ಬೊಯಿಸರ್ ನಲ್ಲಿ ದೇವೀ ಜಪಪಾರಾಯಣ ಸಂಪನ್ನ

Mumbai News Desk