September 6, 2026
Mumbai News Kannada
ಸುದ್ದಿ

ಡಹಾಣು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೆ ಆರಂಭ





      ದೇಶದ 61 ಶಕ್ತಿಪೀಠಗಳಲ್ಲಿ ಒಂದಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ನ ಅಸಂಖ್ಯ ಭಾವಿಕರ ಶೃದ್ಧಾಸ್ಥಾನವಾಗಿರುವ ಡಹಾಣೂವಿನ ಶ್ರೀ ಮಹಾಲಕ್ಶ್ಮೀ ಮಂದಿರದಲ್ಲಿನ ವಾರ್ಷಿಕ ಜಾತ್ರೆಯು ಇದೇ ಎಪ್ರಿಲ್ 23 ರ ಹನುಮಾನ್ ಜಯಂತಿಯಂದು ಆರಂಭವಾಗಿದೆ. 

      ಮುಂಬೈ ಅಹಮದಾಬಾದ್ ರಾಜಮಾರ್ಗದಲ್ಲಿನ ಚಾರೋಟಿಯ ಡಹಾಣೂ ನಾಸಿಕ್ ಕೂಡುರಸ್ತೆಯಲ್ಲಿಂದ ಸುಮಾರು ಮೂರು ಕಿ.ಮೀ.ದೂರದಲ್ಲಿನ  ವಿವಲ್ ವೇಡೆ ಯಲ್ಲಿ ಹೈವೇ ಬದಿಯಲ್ಲಿಯೇ ಇರುವ ಈ ಪ್ರಸಿದ್ಧ ಮಂದಿರದಲ್ಲಿ ಚೈತ್ರ ಪೂರ್ಣಿಮೆಯಂದು ಆರಂಭವಾಗಿ ಕೃಷ್ಣ ಪಕ್ಷದ ಅಷ್ಟಮಿಯ ತನಕ ಸುಮಾರು 15 ರಿಂದ 20 ದಿನ  ಜರಗುವ  ಈ ಜಾತ್ರೆಗೆ ದೂರದ ಊರುಗಳಿಂದ ಅಸಂಖ್ಯ ಭಕ್ತಾದಿಗಳು ಆಗಮಿಸುತ್ತಾರೆ.

 

ಸ್ಥಳೀಯ ಆದಿವಾಸಿಗಳಾದ ‘ವಾರಲಿ ‘ ಯವರ ಕುಲದೇವಿ ( ರಾಣಿ ಆಯೀ) ಎಂದೇ ನಂಬಿಕೊಂಡು ಪೂಜಿಸಲ್ಪಡುವ ಈ ಮಂದಿರದ ಆಡಳಿತ ಹಾಗೂ ಪೂಜಾ ವಿಧಿವಿಧಾನಗಳನ್ನು ಇಲ್ಲಿನ ಸಾತವೀ ಕುಟುಂಬಸ್ಥರು ನಡೆಸಿಕೊಂಡು ಬರುತ್ತಾರೆ. 

   ಒಂದು ಗ್ರಾಮದ ಜಾತ್ರೆಯ ಪರಿಪೂರ್ಣ ಸ್ವರೂಪವುಳ್ಳ   ಈ ಜಾತ್ರೆಯಲ್ಲಿ ಭಾಗವಹಿಸಿ ಆನಂದಿಸಲು ಸ್ಥಳೀಯರು ಹಾಗೂ ಪರವೂರಿನ ಅಸಂಖ್ಯ  ಭಕ್ತರು ಬರುತ್ತಾರೆ.

  ಕೆಳಗೆ ಭವ್ಯ ದೇವೀ ಮಂದಿರವಿದ್ದು ಪೂರ್ಣಿಮೆಯಂದು ಜರಗುವ ಹೋಮದಲ್ಲಿ ಭಾಗವಹಿಸಲು   ಹಾಗೂ  ಅನತಿ ದೂರದಲ್ಲಿರುವ ಬೆಟ್ಟದ ಶಿಖರದ  1400 ಅಡಿ ಎತ್ತರದ ( ಮುಸಳ್ಯಾ ಡೋಂಗರ್) ಮೇಲೆ ರಾತ್ರಿಯಲ್ಲಿ     ಜರಗುವ ಧ್ವಜಾರೋಹಣವನ್ನು ವೀಕ್ಢಿಸಲು ಸಾವಿರಾರು ಜನರು ಆಗಮಿಸುತ್ತಾರೆ.

ಮಾಧ್ಯಮ ವರದಿ

ಪಿ.ಆರ್.ರವಿಶಂಕರ್ ಡಹಾಣೂರೋಡ್

8483980035



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (20/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..

Mumbai News Desk

*2025-26ನೆಯ ಸಾಲಿನ SSLC ಪರೀಕ್ಷೆಯಲ್ಲಿ ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ**.

Mumbai News Desk