32 C
Mumbai
March 7, 2026
Mumbai News Kannada
ಪ್ರಕಟಣೆ

ಮೇ 4 ಮತ್ತು 5ರಂದು ನಿಟ್ಟೂರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವ.





ನಿಟ್ಟೂರು ಶ್ರೀ ಕಂಬಿಗಾರ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವ ಮತ್ತು ಮಹಾಅನ್ನಸಂತರ್ಪಣೆ ಇದೇ ಮೇ ತಿಂಗಳ ದಿನಾಂಕ 4 ಮತ್ತು 5 ರಂದು ನಡೆಯಲಿದೆ. ದಿನಾಂಕ 4 ರ ಶನಿವಾರ ಬೆಳಿಗ್ಗೆ 7.30ಕ್ಕೆ ಗಜ ಕಂಬ ಮೂಹೂರ್ತ,10.30ಗೆ ಮಹಾಚಪ್ಪರದ ಆರೋಹಣ,12 ಗಂಟೆಗೆ ಮಹಾಪೂಜೆ,12.30 ಯಿಂದ 3 ರ ವರೆಗೆ ಮಹಾಅನ್ನಸಂತರ್ಪಣೆ ನಡೆಯಲಿದೆ.


ಅಂದು ಸಂಜೆ 4.30ಕ್ಕೆ ದೈವಗಳ ದರ್ಶನ, 5.30 ಗಂಟೆಗೆ ದೈವಸ್ಥಾನದಿಂದ ಮುಖಮೂರ್ತಿ ಭಂಡಾರಗಳನ್ನು ಭವ್ಯ ಮೆರವಣಿಗೆಯಲ್ಲಿ ಮಹಾಚಪ್ಪರಕ್ಕೆ ತಂದು 7.30 ಕ್ಕೆ ಚಪ್ಪರದಲ್ಲಿ ಮಹಾ ಪೂಜೆ ನಡೆಯಲಿದೆ. ಅಂದು ರಾತ್ರಿ 10 ರಿಂದ ಶ್ರೀ ಬಬ್ಬುಸ್ವಾಮಿ ದೈವದ ನೇಮ, ರಾತ್ರಿ 1.30 ಗಂಟೆಯಿಂದ ಶ್ರೀ ತನ್ನಿಮಾನಿಗ ದೇವಿಯ ನೇಮ ನಡೆಯಲಿದೆ.
ಮೇ 5 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಧೂಮಾವತಿ ಬಂಟ ದೈವಗಳ ನೇಮ,1ಗಂಟೆಗೆ ಮಹಾಗುಳಿಗಧ್ವಯ ದೈವಗಳ ನೇಮ, ಸಂಜೆ 4 ಗಂಟೆಗೆ ಕೊರಗಜ್ಜ ದೈವದ ನೇಮ ನಡೆಯಲಿದೆ. ಈ ಎಲ್ಲಾ ಮಹಾದೇವತಾ ಕಾರ್ಯಕ್ರಮಕ್ಕೆ ಊರ ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ನಿಟ್ಟೂರು ಶ್ರೀ ಕಂಬಿಗಾರ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಪ್ರ. ಕಾರ್ಯದರ್ಶಿ ಶ್ರೀ ಸುರೇಂದ್ರ ಮೆಂಡನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



Related posts

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk