32 C
Mumbai
March 7, 2026
Mumbai News Kannada
ಮುಂಬಯಿ

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ. ರಜತ ಮಹೋತ್ಸವದ ಕಾರ್ಯ ಧ್ಯಕ್ಷರಾಗಿ  ಕಡಂದಲೆ ಪರಾರಿ ನ್ಯಾ, ಪ್ರಕಾಶ್ ಎಲ್ ಶೆಟ್ಟಿ ಆಯ್ಕೆ,





ಮುಂಬಯಿ ಮೆ1. ದಕ್ಷಿಣದ ಗಾಣಗಪುರವೆಂದೆ ಪ್ರಸಿದ್ಧಿ ಇರುವ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳತಾಲೂಕಿನ ಕರೋಪಾಡಿ ಗ್ರಾಮದ. ಪ್ರಕೃತಿಯ ಮಡಿಲಲ್ಲಿರುವ   ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ದ  ಶ್ರೀ ಶ್ರೀ ಗುರುದೇವಾನಂದಸ್ವಾಮೀಜಿಯವರ ಆಶೀರ್ವಾದದಲ್ಲಿ ಮಹಾರಾಷ್ಟ್ರದ ಮುಂಬೈ ನಗರದಲ್ಲಿ  25 ವರ್ಷಗಳ ಹಿಂದೆ   ಒಡಿಯೂರು   ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ ಎಂಬ ಸಂಸ್ಥೆ ಪ್ರಾರಂಭಗೊಂಡಿದ್ದು ಇದೀಗ ಈ ಸಂಸ್ಥೆಗೆ 25 ರ ಸಂಭ್ರಮ, 

   ಈ ಬಗ್ಗೆ ಮೇ 1ರಂದು”ಹೋಟೆಲ್ ಸರೋಜ್ & ಸ್ವೀಟ್ ಮಾರ್ಟ್,”  ಸುಮನ್ ನಗರ, ಚೆಂಬೂರ್, ಇಲ್ಲಿ.  ಮಹಾ ರಾಷ್ಟ್ರ ಘಟಕದ ಅಧ್ಯಕ್ಷರಾದ ದಾಮೋದರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು,

 ಮಹಾರಾಷ್ಟ್ರ ಘಟಕದ ಗೌರವ ಪ್ರಧಾನ ಕಾರ್ಯದರ್ಶಿ ಪೇಟೆ ಮನೆ ಪ್ರಕಾಶ್ ಶೆಟ್ಟಿ ಅವರು ಸ್ವಾಗತಿಸಿ ಘಟಕದ 25ನೇ ಸಂಭ್ರಮಾಚರಣೆಯನ್ನು ಧಾರ್ಮಿಕ, ಆಧ್ಯಾತ್ಮಿಕ ಚಿಂತನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಿ, ಭಕ್ತರಲ್ಲಿ  ಜ್ಞಾನ ವೃದ್ಧಿಸುವುದಕ್ಕಾಗಿ ಗ್ರಂಥ ರಚನೆ, ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಬೆಳ್ಳಿ ಹಬ್ಬದ ಸವಿನೆನಪಿಗಾಗಿ  ನಿಧಿ ಸಮರ್ಪಣೆ,  ಹಾಗೂ   ಇತ್ಯಾದಿ ಹಲವು ಧಾರ್ಮಿಕ , ಸಾಮಾಜಿಕ. ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಲಿದೆ ಎಂದು ತಿಳಿಸಿದರು, 

ಈ ರಜತ  ಸಂಭ್ರಮದ ಆಚರಣೆಯ ಕಾರ್ಯಧ್ಯಕ್ಷರಾಗಿ ,ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಸ್ಥಾಪಕ ಅಧ್ಯಕ್ಷ, ಮುಂಬೈಯ ಹೈಕೋರ್ಟ್ ನ  ಪ್ರಸಿದ್ಧ   ನ್ಯಾಯವಾದಿ , ಬಾಂಬೆ  ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ,  ಕಡಂದಲೆ  ಪರಾರಿ ನ್ಯಾ, ಪ್ರಕಾಶ್ ಎಲ್ ಶೆಟ್ಟಿ ಹಾಗೂ, ಉಪ ಕಾರ್ಯ ಧ್ಯಕ್ಷರಾಗಿ ಉದ್ಯಮಿ , ಘಟಕದ ಮಾಜಿ ಉಪ ಅಧ್ಯಕ್ಷ   ಬೊಲ್ನಾಡ್ ಗುತ್ತು ಚಂದ್ರಹಾಸ್ ರೈ. ಕಾರ್ಯದರ್ಶಿಯಾಗಿ ಸಂಘಟಕ, ರಂಗ ಕಲಾವಿದ, ನಿರ್ದೇಶಕ ವಿ ಕೆ ಸುವರ್ಣ ನವಿ ಮುಂಬೈ, ಹಾಗೂ ಕೋಶ ಧಿಕಾರಿಯಾಗಿ .ಡಾ. ಅದಿಪ್ ಕೆ. ಶೆಟ್ಟಿ, ಆಯ್ಕೆಗೊಂಡಿರುವ ದನ್ನು ತಿಳಿಸಿದರು.



Related posts

ಜೇಷ್ಠ ನಾಗರಿಕರಿಗಾಗಿ ಆಯೋಜಿಸಿದ ವಿಶಿಷ್ಟ ಕಾರ್ಯಕ್ರಮ ” ಪಿಂದಣಿಗೆದ ತುಪ್ಪೆ”

Mumbai News Desk

ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಪೂರ್ವ – ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ 26ನೇ ವಾರ್ಷಿಕ ಅಯ್ಯಪ್ಪ ಪೂಜೆ ಸಂಪನ್ನ.

Mumbai News Desk

ಭಾಯಂದರ್ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿಯ ಆಶ್ರಯದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಡೊಂಬಿವಲಿ  ಶ್ರೀ ಜಗದಂಬಾ ಮಂದಿರ 10ನೇ ವಾರ್ಷಿಕೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk