April 2, 2025
ಕರಾವಳಿ

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ

ಕಾಪು  : ಎರಡು ವರ್ಷಕ್ಕೊಮ್ಮೆ ಮಹತ್ವಪೂರ್ಣವಾಗಿ ನಡೆಯುವ ಕಾಪುವಿನ ಪಿಲಿಕೋಲಕ್ಕೆ ಇಂದು ಮೇ 4. ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು.

   ಹತ್ತಿರದ ಕೆರೆಯಲ್ಲಿ ಪಿಲಿದೈವ ನರ್ತಕ ಸ್ನಾನಾದಿ ಕಾರ್ಯ ಮುಗಿಸಿ ಬಳಿಕ ದೈವಸ್ಥಾನದ ಮುಂಭಾಗದಲ್ಲಿ ತೆಂಗಿನ ಗರಿಗಳಿಂದ ತಯಾರಿಸಲಾದ ಸಿರಿಯಿಂದ ಮಾಡಿದ ಗುಂಡದೊಳಗೆ ಹುಲಿವೇಷದ ಬಣ್ಣಗಾರಿಕೆ ನಡೆಯುತು,

ಈ ವೇಳೆ ಗುಂಡದೊಳಗೆ ಹಾಗೂ ಸುತ್ತಮುತ್ತ ಯಾರೂ ಪ್ರವೇಶ ಮಾಡುವಂತಿಲ್ಲ. ಹುಲಿವೇಷದ ಬಣ್ಣಗಾರಿಕೆಯೊಂದಿಗೆ ವಿಚಿತ್ರವಾಗಿ ಹುಲಿಯಂತೆ ಆರ್ಭಟಿಸುತ್ತ ಒಲಿಗುಂಡದಿಂದ ವೇಷಧಾರಿ ವೈಭವದಿಂದ ಹೊರಬರುವ ಮೂಲಕ ಪಿಲಿಕೋಲಕ್ಕೆ ಚಾಲನೆ ದೊರೆಯುತ್ತದೆ. ಹುಲಿ ಬೇಟೆಯ ಜೊತೆಗೆ ಗ್ರಾಮ ಸಂಚಾರಕ್ಕೆ ಹೊರಟು ಹಳೆ ಮಾರಿಗುಡಿ ಮುಂಭಾಗದ ಬಾಳೆಯ ಗರುಡ- ಗಂಬವನ್ನು ಮುರಿಯುವ ಹುಲಿ ವೇಷಧಾರಿ, ಜೀವಂತ ಕೋಳಿಯ ರಕ್ತ ಹೀರುವ ಸನ್ನಿವೇಶ ಮೈ ಜುಮ್ಮೆನಿಸುತ್ತದೆ. ಈ ಸಮಯದಲ್ಲಿ ಹುಲಿಯ ಅರ್ಭಟ, ಹಾರಾಟ ಮೈನವಿರೇಳಿಸುತ್ತದೆ.

ಕಾರಣಿಕ ಹಾಗೂ ದೈವಿಕ ಹಿನ್ನೆಲೆ ಹೊಂದಿರುವ ಪಿಲಿಭೂತ ಕೋಲದಲ್ಲಿ ಹುಲಿ ಮುಟ್ಟಿದರೆ ಮರಣ ಭೀತಿಯ ನಂಬಿಕೆ ಇರುವುದರಿಂದ ಪಿಲಿಕೋಲವನ್ನು ಸಾಕಷ್ಟು ದೂರದಲ್ಲಿ ನಿಂತು ಜನರು ವೀಕ್ಷಿಸುತ್ತಾರೆ. ಕಾಪು ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಈ ಅವಧಿಯಲ್ಲಿ ಪಿಲಿಕೋಲ ಮಾತ್ರವಲ್ಲದೆ ಮುಗ್ಗೇರ್ಕಳ, ತನ್ನಿಮಾನಿಗ, ಬಬ್ಬರ್ಯ, ಗುಳಿಗ ಹಾಗೂ ಪರಿವಾರ ದೈವಗಳ ನೇಮೋತ್ಸವವೂ ನಡೆಯುತ್ತದೆ. ಆದರೆ, ಕೊನೆಯಲ್ಲಿ ನಡೆಯುವ ಪಿಲಿಕೋಲವನ್ನು ನೋಡಲು ಜನಸಾಗರವೇ ಹರಿದು ಬಂದಿದೆ.

———-

ಎರಡು ವರ್ಷಗಳಿಗೊಮ್ಮೆ ವಿಜೃಂಭಣೆಯಿಂದ ಕಾಪು ಪಿಲಿಕೋಲ ನಡೆಯುತ್ತಿದ್ದು ಈ ವಿಶಿಷ್ಟ ಆಚರಣೆ ವೀಕ್ಷಣೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ನೆಲೆಸಿರುವ ಸಾವಿರಾರು ತುಳುವರು ಬರುತ್ತಾರೆ. ಅಪಾರ ಜನಾಕರ್ಷಣೆಗೆ ಒಳಗಾಗಿರುವ ವೈವಿಧ್ಯಮಯ ಪಿಲಿಕೋಲ ಈ ಭಾಗದಲ್ಲಿ ಅತ್ಯಂತ ಪ್ರಸಿದ್ಧ.

ಪರಶುರಾಮ ಸೃಷ್ಟಿಯ ತುಳುನಾಡು ದೈವಾರಾಧನೆಯ ನೆಲವಾಗಿದ್ದು ಇಲ್ಲಿ ದೇವರಿಗಿಂತ ದೈವಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಪ್ರಕೃತಿ ಆರಾಧಕರಾಗಿರುವ ತುಳುವರು ಪ್ರಕೃತಿಯ ಶಕ್ತಿಗಳನ್ನೇ ದೈವಗಳಾಗಿ ನಂಬಿ ಆರಾಧಿಸುತ್ತಾ ಬಂದಿದ್ದು ಅಂತಹ ಆರಾಧನೆಗಳಲ್ಲಿ ಪಿಲಿಕೋಲವೂ ಒಂದಾಗಿದೆ.

ಕಾರಣಿಕ ಹಾಗೂ ದೈವಿಕ ಹಿನ್ನೆಲೆ ಹೊಂದಿರುವ ಪಿಲಿಭೂತ ಕೋಲದಲ್ಲಿ ಹುಲಿ ಮುಟ್ಟಿದರೆ ಮರಣ ಭೀತಿಯ ನಂಬಿಕೆ ಇರುವುದರಿಂದ ಪಿಲಿಕೋಲವನ್ನು ಸಾಕಷ್ಟು ದೂರದಲ್ಲಿ ನಿಂತು ಜನರು ವೀಕ್ಷಿಸುತ್ತಾರೆ. ಇತರ ದೈವಗಳ ಕೋಲಗಳಂತೆ ಹತ್ತಿರದಿಂದ

ಹುಲಿಕೋಲವನ್ನು ವೀಕ್ಷಿಸಲಾಗುವುದಿಲ್ಲ. ಪಿಲಿಕೋಲದ

ದೈವಾರ್ಷಿಕ ನಡಾವಳಿಯು ಒಂದು ರೀತಿಯಲ್ಲಿ ಯುವಜನಾಂಗಕ್ಕೆ

ಪುಳಕ ಹುಟ್ಟಿಸುವುದು ಮಾತ್ರವಲ್ಲದೆ, ಅಚ್ಚುಮೆಚ್ಚಿನ

ನೇಮೋತ್ಸವವೂ ಆಗಿದೆ.

Related posts

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಉಳಿಯ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ50,000 ರೂ. ದೇಣಿಗೆ ಘೋಷಣೆ

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ