32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ






ಉಡುಪಿಯ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠದ ನೂತನ ಬಾಲಭೋಜನಾಲಯ ಮತ್ತು ಧ್ಯಾನ ಮಂದಿರದ ಲೋಕಾರ್ಪಣ ಸಮಾರಂಭ ಮೇ 10ರ ಶುಕ್ರವಾರ ಜರಗಲಿದೆ.
ಅಂದು ಬೆಳಿಗ್ಗೆ 8.30 ಗಂಟೆಗೆ ಗಣಹೋಮ, ಬೆಳ್ಳಿಗ್ಗೆ 9.30ಕ್ಕೆ ಮಕ್ಕಳ ಭಜನಾ ಕುಣಿತ ಸ್ಪರ್ಧೆ, ಮದ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆದು ಮಧ್ಯಾಹ್ನ 12.30ರಿಂದ ಅನ್ನಸಂತರ್ಪಣೆ ಆರಂಭವಾಗಲಿದೆ.
ಸಂಜೆ 6 ಗಂಟೆಗೆ ಉದ್ಯಮಿ, ಗುರುಗಳ ಪರಮ ಭಕ್ತ ಕೆ. ಕೆ. ಆವರ್ಸೆಕರ್ ಅವರ ಅಧ್ಯಕ್ಷೆತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದ್ದು, ಶ್ರೀಧಾಮ ಮಾಣಿಲ ದ ಪರಮಾಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿರುವರು.’ಆನಂದಾಶ್ರಮ’, ಬೇವಿನಕೊಪ್ಪ ದ ಪರಮಾಪೂಜ್ಯ ಶ್ರೀ ಶ್ರೀ ವಿಜಯಾನಂದ ಸ್ವಾಮೀಜಿ ಶುಭಾಶಂಸನೆ ಗೈಯಲಿರುವರು.


ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ, ದಾನಿ ಸುರೇಂದ್ರ ಕಲ್ಯಾಣಪುರ, ಶ್ಯಾಮಿಲಿ ಪ್ಯಾಮಿಲಿ ಟ್ರಸ್ಟ್ ನ ಪ್ರವರ್ಥಕ ನಾಡೋಜ ಜಿ ಶಂಕರ್ ಸಮಾರಂಭದಲ್ಲಿ ಉಪಸ್ಥಿತರಿರುವರು.


ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ – ಉಡುಪಿಯ ಆಡಳಿತ ಟ್ರಷ್ಟಿ ಕೆ ಕೆ ಆವರ್ಸೆಕರ್, ಎಕ್ಸಿಕ್ಯೂಟಿವ್ ಟ್ರಷ್ಟಿ ಕೆ ದಿವಾಕರ ಶೆಟ್ಟಿ ತೋಟದಮನೆ, ಜಾಯಿಂಟ್ ಎಕ್ಸಿಕ್ಯೂಟಿವ್ ಟ್ರಷ್ಟಿ ಮೋಹನ್ಚಂದ್ರನ್ ನಂಬಿಯಾರ್, ಕಾರ್ಯದರ್ಶಿ ತೋನ್ಸೆ ನವೀನ್ ಶೆಟ್ಟಿ ಮುಂಬಯಿ, ಕೋಶಧಿಕಾರಿ ನರಸಿಂಹ ಶೆಣೈ ಎಂ, ಸುರೇಂದ್ರ ಕಲ್ಯಾಣಪುರ ಮುಂಬೈ, ಪುರುಷೋತ್ತಮ ಪಿ ಶೆಟ್ಟಿ ಉಡುಪಿ, ಮಾಜಿ ಸಚಿವ ಬಿ ನಾಗರಾಜ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ ಮುಂಬೈ, ನಿತ್ಯಾನಂದ ಖೋಡೆ ಬೆಂಗಳೂರು, ರವಿ ಎಸ್ ಶೆಟ್ಟಿ ಸಾಯಿರಾಧ ಮುಂಬೈ, ಸೂರ್ಯಪ್ರಕಾಶ್ ಕೆ ಹರ್ಷ ಗ್ರೂಪ್ ಉಡುಪಿ, ರವೀನಾಥ್ ವಿ ಶೆಟ್ಟಿ ಅಂಕಲೇಶ್ವರ, ಕೆ ನಟರಾಜ್ ಹೆಗ್ಡೆ ಪಳ್ಳಿ, ಸತೀಶ್ ಶೆಟ್ಟಿ ಪಟ್ಲ, ಪ್ರಕಾಶ್ ಕೆ ಬೆಂಗಳೂರು, ಆಶಿಶ್ ಕೆ ಆವರ್ಸೆಕರ್ ಮುಂಬೈ, ಸಿ ಕೆ ಪಾಟೀಲ್ ಸಿಎ ಮುಂಬೈ, ಶಾರದಾ ಸೂರು ಕರ್ಕೇರ ಉಡುಪಿ, ಸಿಬಿಡಿ ಭಾಸ್ಕರ್ ಶೆಟ್ಟಿ ಮುಂಬೈ ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಬನ್ನಂಜೆ, ಪ್ರಧಾನ ಕಾರ್ಯದರ್ಶಿ ಈಶ್ವರ್ ಶೆಟ್ಟಿ ಚಿಟ್ಪಾಡಿ, ಕೋಶಾಧಿಕಾರಿ ಶಶಿಕುಮಾರ್ ಶೆಟ್ಟಿ ಗೋವಾ, ಕಾರ್ಯಕಾರಿ ಸಮಿತಿ ಹಾಗೂ ಸೇವಾ ಸಮಿತಿ ಸದಸ್ಯರು ಗುರು ಮೇ.10ರಂದು ಜರಗುವ ಸಮಾರಂಭಕ್ಕೆ ಎಲ್ಲರನ್ನೂ ಸ್ವಾಗತಿಸಿದ್ದಾರೆ.

ವಿಶೇಷ ಸೂಚನೆ : ದಿನಾಂಕ 9, ಗುರುವಾರ ಸಂಜೆ 4 ಗಂಟೆಯಿಂದ ರಾತ್ರಿ 7.30ರ ತನಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ” ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಏರ್ಮಾಳು” ಅವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.



Related posts

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಜ. 27ಕ್ಕೆ ವಾರ್ಷಿಕ ಮಹೋತ್ಸವದ ಸಂಭ್ರಮ:

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk

ಮೇ 2: ಇನ್ನಂಜೆ  ಶಶಿಧರ ಶೆಟ್ಟಿ  ದಂಪತಿಯ ನೇತೃತ್ವದಲ್ಲಿ ಕಾಪು ಶೃಷ್ಟಿ ರೆಸಿಡೆನ್ಸಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

Mumbai News Desk