April 2, 2025
ಸುದ್ದಿ

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ

ಮುಂಬಯಿ : ಹೆಸರಾಂತ ಕ್ರೀಡಾಪಟು, ಸಮಾಜ ಸೇವಕ ಪುರುಷೋತ್ತಮ ಕೆ. ಐಲ್ (79) ಅಲ್ಪಕಾಲದ ಅನಾರೋಗ್ಯದಿಂದಾಗಿ ಮೇ. 8 ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು,  ಓರ್ವ ಪುತ್ರಿ ಹಾಗೂ ಅಪಾರ ಸಂಬಂಧಿಕರನ್ನು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. 

ಮೂಲತ: ಕಾಸರಗೋಡು ಜಿಲ್ಲೆಯ ಉಪ್ಪಳದ ಐಲ ದವರಾದ ಇವರು ಸುಮಾರು 5 ದಶಯಗಳ ದಶಕಗಳ ಕಾಲ ದಿ ಯಂಗ್ ಎಂಗ್ ಮೆನ್ಸ್  ಬೋವಿ ಅಸೋಸಿಯೇಷನ್ (ವೈ. ಎಂ. ಬಿ. ಎ.) ಮುಂಬಯಿ ಇದರಲ್ಲಿ ಕ್ರೀಯಾಶೀಲರಾಗಿದ್ದು ಇದರ ಮಾಜಿ ಅಧ್ಯಕ್ಷರು. ಮೊಯಾ ಸಮುದಾಯದ ಏಕೈಕ ಕ್ರೀಡಾ ಸಂಘಟನೆ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ 40 ವರ್ಷಗಳಿಂದ ಸೇವೆ ಮಾಡುತ್ತಿದ್ದ ಇವರು ಪ್ರಸ್ತುತ ಕಳೆದ ೧೫ ವರ್ಷಗಳಿಂದ ಇದರ ಅಧ್ಯಕ್ಷರಾಗಿ ಸಮಾಜದ ಯುವ ಕ್ರೀಡಾ ಪಟುಗಳಿಗೆ ಸ್ಪೂರ್ತಿಯಾಗಿದ್ದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಬಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮುಂಬಯಿಯ ಎಲ್ ಆಂಡ್ ಟಿ ಸಂಸ್ಥೆಯಲ್ಲಿ ದೀರ್ಘ್ ಕಾಲ ಸೇವೆ ಸಲ್ಲಿಸಿ ಸ್ವಂಥ ಉದ್ದಿಮೆಯನ್ನು ಹೊಂದಿದ್ದರು. ವಾಮಂಜೂರು ಹದಿನಾರು ಸಮಸ್ಥರ ಸಭೆ ಮಾಟುಂಗಾ, ನೇತಿಲ ಗುತ್ಯಮ್ಮ ಭಗವತೀ ಭಂಡಾರ, ಮೋಯಾ ಕ್ರೆಡಿಟ್ ಸೊಸೈಟಿ, ಗೋರೆಗಾಂವ್ ಕರ್ನಾಟಕ ಸಂಘ ಹೀಗೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಇವರು ಉತ್ತಮ ಸಮಾಜ ಸೇವಕರಾಗಿದ್ದು ಇವರ ನಿಧನಕ್ಕೆ ದಿ ಯಂಗ್ ಎಂಗ್ ಮೆನ್ಸ್  ಬೋವಿ ಅಸೋಸಿಯೇಷನ್, ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್, ವಾಮಂಜೂರು ಹದಿನಾರು ಸಮಸ್ಥರ ಸಭೆಯ ಕಾರ್ಯಕಾರಿ ಸಮಿತಿ ಹಾಗೂ ಎಲ್ಲಾ ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.

Related posts

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಚಾರಿಟೇಬಲ್ ಟ್ರಸ್ಟ್, ಕಲ್ಯಾಣ್ ವತಿಯಿಂದ ಗಣೇಶಪುರಿಯಲ್ಲಿ  ಭಂಡಾರ ಸೇವೆ ಸಂಪನ್ನ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ

Mumbai News Desk