30 C
Mumbai
April 24, 2026
Mumbai News Kannada
ಸುದ್ದಿ

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ





ಮುಂಬಯಿ : ಹೆಸರಾಂತ ಕ್ರೀಡಾಪಟು, ಸಮಾಜ ಸೇವಕ ಪುರುಷೋತ್ತಮ ಕೆ. ಐಲ್ (79) ಅಲ್ಪಕಾಲದ ಅನಾರೋಗ್ಯದಿಂದಾಗಿ ಮೇ. 8 ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು,  ಓರ್ವ ಪುತ್ರಿ ಹಾಗೂ ಅಪಾರ ಸಂಬಂಧಿಕರನ್ನು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. 

ಮೂಲತ: ಕಾಸರಗೋಡು ಜಿಲ್ಲೆಯ ಉಪ್ಪಳದ ಐಲ ದವರಾದ ಇವರು ಸುಮಾರು 5 ದಶಯಗಳ ದಶಕಗಳ ಕಾಲ ದಿ ಯಂಗ್ ಎಂಗ್ ಮೆನ್ಸ್  ಬೋವಿ ಅಸೋಸಿಯೇಷನ್ (ವೈ. ಎಂ. ಬಿ. ಎ.) ಮುಂಬಯಿ ಇದರಲ್ಲಿ ಕ್ರೀಯಾಶೀಲರಾಗಿದ್ದು ಇದರ ಮಾಜಿ ಅಧ್ಯಕ್ಷರು. ಮೊಯಾ ಸಮುದಾಯದ ಏಕೈಕ ಕ್ರೀಡಾ ಸಂಘಟನೆ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ 40 ವರ್ಷಗಳಿಂದ ಸೇವೆ ಮಾಡುತ್ತಿದ್ದ ಇವರು ಪ್ರಸ್ತುತ ಕಳೆದ ೧೫ ವರ್ಷಗಳಿಂದ ಇದರ ಅಧ್ಯಕ್ಷರಾಗಿ ಸಮಾಜದ ಯುವ ಕ್ರೀಡಾ ಪಟುಗಳಿಗೆ ಸ್ಪೂರ್ತಿಯಾಗಿದ್ದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಬಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮುಂಬಯಿಯ ಎಲ್ ಆಂಡ್ ಟಿ ಸಂಸ್ಥೆಯಲ್ಲಿ ದೀರ್ಘ್ ಕಾಲ ಸೇವೆ ಸಲ್ಲಿಸಿ ಸ್ವಂಥ ಉದ್ದಿಮೆಯನ್ನು ಹೊಂದಿದ್ದರು. ವಾಮಂಜೂರು ಹದಿನಾರು ಸಮಸ್ಥರ ಸಭೆ ಮಾಟುಂಗಾ, ನೇತಿಲ ಗುತ್ಯಮ್ಮ ಭಗವತೀ ಭಂಡಾರ, ಮೋಯಾ ಕ್ರೆಡಿಟ್ ಸೊಸೈಟಿ, ಗೋರೆಗಾಂವ್ ಕರ್ನಾಟಕ ಸಂಘ ಹೀಗೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಇವರು ಉತ್ತಮ ಸಮಾಜ ಸೇವಕರಾಗಿದ್ದು ಇವರ ನಿಧನಕ್ಕೆ ದಿ ಯಂಗ್ ಎಂಗ್ ಮೆನ್ಸ್  ಬೋವಿ ಅಸೋಸಿಯೇಷನ್, ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್, ವಾಮಂಜೂರು ಹದಿನಾರು ಸಮಸ್ಥರ ಸಭೆಯ ಕಾರ್ಯಕಾರಿ ಸಮಿತಿ ಹಾಗೂ ಎಲ್ಲಾ ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.



Related posts

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ದ್ವಿತೀಯ ಪಿಯುಸಿ ಪರೀಕ್ಷೆ : 96% ಅಂಕ ಪಡೆದ ಸೃಜನ್ ಬಿ ಮೊಗವೀರ

Mumbai News Desk