September 6, 2026
Mumbai News Kannada
ಸುದ್ದಿ

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ





ಮಂಗಳೂರು / ಮುಂಬಯಿ : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು – ಅಳಿಕೆ ಬಂಟ್ವಾಳ ತಾಲೂಕು ಇದರ ಸಂಪೂರ್ಣ ಜೀರ್ಣೋದ್ದಾರ ಕಾರ್ಯವು ಅಂತಿಮ ಹಂತದಲ್ಲಿದ್ದು ಮೇ. ೧೦ ರಂದು ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಮುಂಬಯಿಯ ಉದ್ಯಮಿ, ಕೊಡುಗೈ ದಾನಿ, ತೀಯಾ ಸಮಾಜ ಮುಂಬಯಿಯ ಅಧ್ಯಕ್ಷ, ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿಯ ಆಡಳಿತ ಮೊಕ್ತೇಸರರಾದ ಕೃಷ್ಣ ಎನ್. ಉಚ್ಚಿಲ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿದ್ದು ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ತೀಯಾ ಸಮುದಾಯದ ವಿವಿಧ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಮೇ. ೧೦ ರಂದು ಪೂರ್ವಾಹ್ನ ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಕಾರ್ಯಕ್ರಮದ ಯಶಸ್ಸಿಗೆ ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ, ಬೊಳ್ನಾಡು ಶ್ರೀ ಭಗವತೀ ಯುವಜನ ಸಂಘ, ಬೊಳ್ನಾಡು ಶ್ರೀ ಭಗವತೀ ಮಹಿಳಾ ಸಂಘ, ಬೊಳ್ನಾಡು ಶ್ರೀ ಭಗವತೀ ಭಜನಾ ಸಂಘ, ತೀಯಾ ಲಿಟಲ್ ಟೈಗರ್ಸ್ ಬೊಳ್ನಾಡು ನ ಎಲ್ಲಾ ಸದಸ್ಯರು ಹಾಗೂ ಭಕ್ತರು ಸಹಕರಿಸಿದರು.

  • ಈಶ್ವರ ಎಂ. ಐಲ್


Related posts

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ನ್ಯೂ ಪನ್ವೇಲ್ ನ ನಗರ ಸೇವಕ ಸಂತೋಷ್ ಜಿ ಶೆಟ್ಟಿ ಸಾಯೋಗದಲ್ಲಿ ಶ್ರೀ ಜೈ ಅಂಬೇ ಮಾತಾ ಮಂದಿರ ದ ಮೈದಾನದಲ್ಲಿ  ಶ್ರೀ ರಾಮ ಮಹೋತ್ಸವ ಸಂಭ್ರಮ ಆಚರಣೆ .

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk