32 C
Mumbai
March 7, 2026
Mumbai News Kannada
ಸುದ್ದಿ

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.





ಮುಂಬಯಿ : ಬಿಲ್ಲವರ ಎಸೋಸಿಯೇಶನ್ ಮುಂಬಯಿ, ಇದರ ಸೇವಾದಳದ ಕಾರ್ಯಧ್ಯಕ್ಷ, ಹೋಟೆಲ್ ಉದ್ಯಮಿ, ನಾಗೇಶ್ ಎಂ ಕೋಟ್ಯಾನ್ ಇಂದು ರಾತ್ರಿ (ಮೇ.19)ಹೃದಯಘಾತದಿಂದ ನಿಧನ ಹೊಂದಿದರು.
ಮೂಲತಃ ಬಂಟ್ವಾಳ, ಪರಂಗಿಪೇಟೆಯವರಾಗಿದ್ದ ನಾಗೇಶ್ ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರನ್ನು, ಮೂವರು ಸಹೋದರರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವರು.
ಮುಂಬಯಿ ಬಿಲ್ಲವರ ಪ್ರತಿಷ್ಟಿತ ಸಂಘಟನೆ ಬಿಲ್ಲವರ ಎಸೋಸೋಸಿಯೇಶನ್ ನ ಸಕ್ರಿಯ ಸದಸ್ಯರಾಗಿದ್ದ ಅವರು ಯುವ ಅಭ್ಯುದಯ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು, ಪ್ರಸ್ತುತ ಸೇವಾದಳದ ಕಾರ್ಯಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದರು.
ಸದಾ ನಗುಮುಖದ, ಸರಳ, ಮೃದು ಸ್ವಭಾವದವರಾಗಿದ್ದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಅವರ ಅಂತ್ಯಕ್ರಿಯೆ ನಾಳೆ, ಮೇ.20ರಂದು ಪರಂಗಿಪೇಟೆಯ ಸ್ವಗ್ರ ಹದಲ್ಲಿ ನಡೆಯಲಿದೆ.
ನಾಗೇಶ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು, ಉಪ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಹಾಗೂ ನಿರ್ದೇಶಕರುಗಳು, ಜಯ ಸುವರ್ಣ ಅವರ ಅಭಿಮಾನಿಗಳು ಮತ್ತು ಬಿಲ್ಲವರ ಹಿತ ಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಉಡುಪಿಯಲ್ಲಿ ಜರಗಿದ ಯಶಸ್ವಿ ಸರಣಿ ಕಾರ್ಯಕ್ರಮಗಳು

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk