July 23, 2026
Mumbai News Kannada
ಸುದ್ದಿ

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.







ಮುಂಬಯಿ : ಬಿಲ್ಲವರ ಎಸೋಸಿಯೇಶನ್ ಮುಂಬಯಿ, ಇದರ ಸೇವಾದಳದ ಕಾರ್ಯಧ್ಯಕ್ಷ, ಹೋಟೆಲ್ ಉದ್ಯಮಿ, ನಾಗೇಶ್ ಎಂ ಕೋಟ್ಯಾನ್ ಇಂದು ರಾತ್ರಿ (ಮೇ.19)ಹೃದಯಘಾತದಿಂದ ನಿಧನ ಹೊಂದಿದರು.
ಮೂಲತಃ ಬಂಟ್ವಾಳ, ಪರಂಗಿಪೇಟೆಯವರಾಗಿದ್ದ ನಾಗೇಶ್ ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರನ್ನು, ಮೂವರು ಸಹೋದರರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವರು.
ಮುಂಬಯಿ ಬಿಲ್ಲವರ ಪ್ರತಿಷ್ಟಿತ ಸಂಘಟನೆ ಬಿಲ್ಲವರ ಎಸೋಸೋಸಿಯೇಶನ್ ನ ಸಕ್ರಿಯ ಸದಸ್ಯರಾಗಿದ್ದ ಅವರು ಯುವ ಅಭ್ಯುದಯ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು, ಪ್ರಸ್ತುತ ಸೇವಾದಳದ ಕಾರ್ಯಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದರು.
ಸದಾ ನಗುಮುಖದ, ಸರಳ, ಮೃದು ಸ್ವಭಾವದವರಾಗಿದ್ದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಅವರ ಅಂತ್ಯಕ್ರಿಯೆ ನಾಳೆ, ಮೇ.20ರಂದು ಪರಂಗಿಪೇಟೆಯ ಸ್ವಗ್ರ ಹದಲ್ಲಿ ನಡೆಯಲಿದೆ.
ನಾಗೇಶ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು, ಉಪ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಹಾಗೂ ನಿರ್ದೇಶಕರುಗಳು, ಜಯ ಸುವರ್ಣ ಅವರ ಅಭಿಮಾನಿಗಳು ಮತ್ತು ಬಿಲ್ಲವರ ಹಿತ ಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಜೀವನ್ ಸೇವಾ ಬ್ರಿಗೇಡ್‌ ಪಡುಬಿದ್ರಿ: ವೈದ್ಯಕೀಯ ಆರ್ಥಿಕ ನೆರವು ವಿತರಣೆ

Mumbai News Desk

ವಜ್ರೇಶ್ವರಿ ಶಿಕ್ಷಣ ಪ್ರಸಾರಕ ಮಂಡಳಿ, ಸುರೇಂದ್ರ ಕಲ್ಯಾಣ್ ಪುರ್ ನಿರ್ಮಿತ ನೂತನ ಕಟ್ಟಡದ ಉದ್ಘಾಟನೆ

Mumbai News Desk

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ಮಂಗಳೂರಿನ ಕುಲಾಲ ಭವನ ಲೋಕಾರ್ಪಣೆ; 

Mumbai News Desk

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk