32 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )





ಶ್ರೀ ಸಾಯಿ ಈಶ್ವರ್ ಗುರೂಜಿಯವರ ಯವರ ಸಂಕಲ್ಪದಲ್ಲಿ 2018 ರಂದು ಸ್ಥಾಪನೆಯಾದ ಪ್ರಾಣಿ-ಪಕ್ಷಿ ಮೋಕ್ಷಕಟ್ಟೆ ಬಳಿಕ ಈ ಕಟ್ಟೆಯಲ್ಲಿ ಕಾಲಭೈರವ ಸ್ವಾಮಿ ನೆಲೆಗೊಂಡಿದ್ದಾನೆ. ಹಾಗೂ ಅವನಿಗೆ ಉಜ್ಜಯಿನಿ ಸಂಕಲ್ಪದಲ್ಲಿ ಸೇವೆ ನಡೆಯಬೇಕು ಎಂದು ಗುರು ನೀಡಿದ ಆಜ್ಞೆಯಂತೆ 2024ರ ಡಿಸೆಂಬರ್ ನಲ್ಲಿ ದೇಶದಾದ್ಯಂತ ಶ್ರೀ ಕ್ಷೇತ್ರಕ್ಕೆ ಬಂದ 150ಕ್ಕೂ ಹೆಚ್ಚು ಸಾಧು-ಸಂತರ ಉಪಸ್ಥಿತಿಯಲ್ಲಿ ಶಿಲಾಮಯ್ಯ ಗುಡಿಯಲ್ಲಿ ಕಾಲಭೈರವ ಸ್ವಾಮಿಯ ಪ್ರತಿಷ್ಠೆ ನಡೆದಿತ್ತು. ಅಂದಿನಿಂದ ಈ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ತಮ್ಮ ಪ್ರಾರ್ಥನೆಯನ್ನು ಕಾಲಭೈರವ ಸ್ವಾಮಿಗೆ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಂಡ ಸಾವಿರಾರು ಉದಾಹರಣೆಗಳಿವೆ. ಕಾಲಭೈರವ ಸ್ವಾಮಿಗೆ ಉಜ್ಜಯಿನಿಯ ಸಂಕಲ್ಪದಂತೆ ಪ್ರತಿದಿನ ಸಂಜೆ ಭಕ್ತರು ನೀಡಿದ ಮಧ್ಯವನ್ನು ನೈವೇದ್ಯವಾಗಿ ಸಲ್ಲಿಸಲಾಗುತ್ತದೆ.


2024 ಮೇ 19ರ ಆದಿತ್ಯವಾರ ಸಂಜೆ ನೈವೇದ್ಯ ಸೇವೆಯನ್ನ ಸಮರ್ಪಿಸುವಾಗ ಮಧ್ಯ ಹಾಕಿದ ತಟ್ಟೆ ಯಿಂದ ಮದ್ಯವನ್ನು ಹೀರಿಕೊಳ್ಳುವ ಘಟನೆಯನ್ನು ಆಶ್ಚರ್ಯಚಕಿತರಾಗಿ ಗಮನಿಸಿದ ಭಕ್ತರು ವಿಡಿಯೋ ಚಿತ್ರೀಕರಣ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾದ ಕಾರಣ ಮತ್ತಷ್ಟು ಭಕ್ತರನ್ನು ಶ್ರೀ ಕ್ಷೇತ್ರಕ್ಕೆಆಕರ್ಷಿಸುತ್ತಿದೆ. ಮಧ್ಯ ನೀಡುವುದರಿಂದ ಭಕ್ತರಿಗೆ ಬರುವ ಅನಾರೋಗ್ಯ, ಸಂಕಷ್ಟ ನೋವುಗಳನ್ನ ತನ್ನಲ್ಲಿಗೆ ಹೀರಿಕೊಳ್ಳುತ್ತಿದ್ದಾನೆ ಎಂಬ ನಂಬಿಕೆ ಭಕ್ತರು..



Related posts

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಕುಕ್ಕಳ ಶ್ರೇಯಸ್ ಪೂಜಾರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

Mumbai News Desk

ಕೇಂದ್ರ ಬಜೆಟ್ 2025ರ ಪ್ರಮುಖ ಮುಖ್ಯಾಂಶಗಳು

Mumbai News Desk

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk