30.5 C
Mumbai
June 8, 2026
Mumbai News Kannada
ಮುಂಬಯಿ

ನಾಲಾಸೋಪಾರ ದ ಉದ್ಯಮಿ, ಸಮಾಜ ಸೇವಕ. ಸಂಘಟಕ,  ಶಶಿಧರ. ಕೆ ಶೆಟ್ಟಿ ಇನ್ನಂಜೆಯವರಿಗೆ ಪೋಲಿಸ್ ಇಲಾಖೆಯ ಅತ್ಯುತ್ತಮ  ಸೇವಕರ್ತ ಪ್ರಶಸ್ತಿ ಪ್ರದಾನ .





   ನಾಲಾಸೋಪಾರ   ಮೇ 23.ವಸಯಿ ತಾಲೂಕಿನ ಹೋಟೆಲ್ ಉದ್ಯಮಿ. ತುಳುಕುಟ ಫೌಂಡೇಶನ್ ನಾಲಾಸೋಪಾರಸಂಸ್ಥೆಯ ಸಂಸ್ಥಾಪಕರು  ಅಧ್ಯಕ್ಷರು. ಶ್ರೀದೇವಿ ಯಕ್ಷಕಲಾ ನಿಲಯ ನಾಲಾಸೋಪಾರ  -ವಿರಾರ್ ನ್ಅಧ್ಯಕ್ಷ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ. ಮುಂಬೈ ಬಂಟರ ಸಂಘದ ಜೊತೆ ಕೋಶ ಧಿಕಾರಿ. ಸಂಘಟಕರು,  ಶಶಿಧರ. ಕೆ ಶೆಟ್ಟಿ ಇನ್ನಂಜೆ ಯವರು ಅವರ ಸಾಮಾಜಿಕ ಸೇವೆಗಳು ಮತ್ತು ಸಮಾಜದಲ್ಲಿ ಅಪರಾಧ ಕಾರ್ಯಗಳು ನಡೆಯದಂತೆ ಜನಜಾಗೃತಿಯ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿರುವುದನ್ನು ಗಮನಿಸಿ ನಾಲಾಸೋಪಾರ ಅಚೋಲೆ ಪೊಲೀಸ್ ಠಾಣೆಯ ವರಿಷ್ಟ ಪೊಲೀಸ್ ಅಧಿಕಾರಿ ಯವರು ಗೌರವ ಪ್ರಶಸ್ತಿ ಪತ್ರ ನೀಡಿ ಗೌರವಿಸಿದಾಗದೆ.

ಶಶಿಧರ್ ಕೆ ಶೆಟ್ಟಿಯವರು  ಪಾಲ್ಗರ್ ಜಿಲ್ಲೆಯಲ್ಲಿ ವಿವಿಧ ಭಾಷೆಯ ಸಂಘಟನೆಗಳ   ಸೇವಾ ಕಾರ್ಯಗಳಿಗೆ ಪ್ರೋತ್ಸಾಹಕಾರವನ್ನು ನೀಡುತ್ತಾ ಬಂದವರು.

 ಅಲ್ಲದೆ ವಸಯಿ ತಾಲೂಕಿನ ತುಳು ಕನ್ನಡಿಗರ ಸಂಘ ಸಂಸ್ಥೆಗಳಿಗೆ. ಧಾರ್ಮಿಕ ಕಾರ್ಯಗಳಿಗೆ. ಮತ್ತಿತರ ಸಮಾಜ ಪರ ಸೇವಾ ಕಾರ್ಯಗಳಿಗೆ ಆರ್ಥಿಕ ಸಹಾಯ ಹಾಗೂ ಪ್ರೋತ್ಸಾಹವನ್ನು ನೀಡುತ್ತಾ. ಪರಿಸರದ ಜನರಲ್ಲಿ ಒಗ್ಗಟ್ಟು. ಸಾಮರಸ್ಯ,  ಬೆಳೆಯುವಲ್ಲಿ ವಿಶೇಷವಾಗಿ ಶ್ರಮಿಸುತ್ತಾ ಬಂದವರು . 

ಇವರ ಸೇವಾ ಕಾರ್ಯಗಳನ್ನು ಗುರುತಿಸಿ ಹಲವಾರು ಸಂಘಟನೆಗಳು ಸನ್ಮಾನಿಸಿ ಗೌರವಿಸಿದೆ. 

ಇದೀಗ ಪೊಲೀಸ್ ಇಲಾಖೆ ಕೂಡ ಇವರ ಸೇವೆಯನ್ನು ಗುರುತಿಸಿ  ಪ್ರಶಸ್ತಿ ನೀಡಿ ಸನ್ಮಾನಿಸಿದೆ.

ಪೋಲಿಸ್ ಇಲಾಖೆಯ ಅತ್ಯುನ್ನತ ಗೌರವನ್ನು ಸ್ವೀಕರಿ ಶಶಿಧರ್ ಶೆಟ್ಟಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು. ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಉಲ್ತೂರು ಮೋಹನ್ ದಾಸ್ ಶೆಟ್ಟಿ ಮತ್ತು  ನಿರ್ದೇಶಕರು. ಮೀರಾ ಭಯಂದರ್ ನ ಸಂಘಟಕ ಬಂಟರ ಸಂಘದ ಜೊತೆ  ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್.

ಬಂಟರ ಸಂಘದ ವಸಾಯಿ- ದಹಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಕೊಡ್ಲಾ ಡಿ ಮತ್ತು ಪದಾಧಿಕಾರಿಗಳು ಮತ್ತು ವಸಯಿ ತಾಲೂಕಿನ ತುಳು ಕನ್ನಡಿಗರು.ಅಭಿನಂದಿಸಿದ್ದಾರೆ..



Related posts

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ರಕ್ತದಾನ ಶಿಬಿರ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾರ್ಥನಾ ಪೂಜಾರಿಗೆ ಶೇ 94.40 ಅಂಕ.

Mumbai News Desk

ಪುತ್ರನ್ ಮೂಲಸ್ಥಾನ ಮುಂಬಯಿ- ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ.

Mumbai News Desk

ಶ್ರೀ ರಾಧಾಕೃಷ್ಣ ಶನೀಶ್ವರ ಮಂದಿರ ಡೊಂಬಿವಲಿ, ಸಂಚಾಲಕರು ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ಸೋಮನಾಥ ಪೂಜಾರಿ ಪುನರಾಯ್ಕೆ

Mumbai News Desk

‘ಡೊಂಬಿವಲಿಯ ಓಂಕಾರ ಕೇಂಬ್ರಿಜ್ ಇಂಟರ್ ನ್ಯಾಸನಲ್ ಶಾಲೆಗೆ ವಿಜ್ಞಾನ ಸ್ಪರ್ಧೆಯಲ್ಲಿ ಪಶ್ಚಿಮ ಭಾರತದಲ್ಲಿ OCIS ಮೊದಲ ಸ್ಥಾನ’

Mumbai News Desk