September 6, 2026
Mumbai News Kannada
ಮುಂಬಯಿ

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ





ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ

ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಕನ್ನಡ ಮಾಧ್ಯಮದಲ್ಲಿ ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 5 ವರ್ಷಗಳಿಂದ ಕನ್ನಡ ಮಾಧ್ಯಮದ ಫಲಿತಾಂಶ ಶೇ.100 ಲಭಿಸುತ್ತಿರುವುದು ವಿಶೇಷತೆಯಾಗಿದೆ. ಕನ್ನಡ ಮಾಧ್ಯಮದಲ್ಲಿ  ಶೇ. 83.20 ಅಂಕಗಳೊಂದಿಗೆ ಅಮಿತ್ ತುಕರಾಮ್ ರಾಥೋಡ್  ಪ್ರಥಮ,   ನಂದಿನಿ ಸಂಜೀವ್ ರಾಠೋಡ್ ಶೇ. 82.60 ಅಂಕಗಳೊಂದಿಗೆ ದ್ವಿತೀಯ,   ರವಿ ರಾಕೇಶ್ ಕರ್ಕಲ್ ಶೇ. 82.60 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

*ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ*

ಆಂಗ್ಲ ಮಾಧ್ಯಮದಲ್ಲಿ ಒಟ್ಟು 135 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು  71 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  56 ವಿದ್ಯಾ ರ್ಥಿಗಳು ಪ್ರಥಮ ಶ್ರೇಣಿ ಹಾಗೂ  8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 14 ವರ್ಷಗಳಿಂದ ಆಂಗ್ಲ ಮಾಧ್ಯಮ ಶಾಲೆಯ ಫಲಿತಾಂಶ ಶೇ 100 ಲಭಿಸುತ್ತಿರುವುದು ಪ್ರಶಂಸನೀಯ. ಆಂಗ್ಲ ಮಾಧ್ಯಮದಲ್ಲಿ       ಶೇ  95.80 ಅಂಕಗಳೊಂದಿಗೆ ಪ್ರಣೀತ ಕೈಲಾಶ್ ಕುರ್ಹಡೆ ಪ್ರಥಮ, ಶೇ 95.00 ಅಂಕಗಳೊಂದಿಗೆ ಗೌರವ್ ಸಂಜಯ್ ಗುಪ್ತ ದ್ವಿತೀಯ, ಹಾಗೂ ಶೇ 94.80 ಅಂಕಗಳೊಂದಿಗೆ ಪ್ರಣವ್ ಕೈಲಾಶ್ ಕುರ್ಹಡೆ ತೃತೀಯ ಸ್ಥಾನ ಪಡೆದಿದ್ದಾರೆ.

ತಮ್ಮ ಸಾಧನೆಯ ಮೂಲಕ ಶಾಲೆಯ ಕೀರ್ತಿಯನ್ನು ಉತ್ತುಂಗ ಶಿಖರಕ್ಕೇರಿಸಿದ ವಿದ್ಯಾರ್ಥಿಗಳಿಗೆ, ಅವರ ಯಶಸ್ಸಿಗೆ ಕಾರಣರಾದ ಮುಖ್ಯ ಶಿಕ್ಷಕರಾದ ಸುರೇಖಾ ಪಂಡಿತ್, ಪ್ರಭು ಕೋತಾಲಿ ಹಾಗೂ ಶಿಕ್ಷಕ/ಶಿಕ್ಷಕಿ ವೃಂದ, ಪಾಲಕರು, ಶಿಕ್ಷಕೇತರ ಸಿಬ್ಬಂದಿಯನ್ನು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ , ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಕಾರ್ಯಾಧ್ಯಕ್ಷರಾದ ಡಾ! ಇಂದ್ರಾಳಿ ದಿವಾಕರ್ ಟಿ ಶೆಟ್ಟಿ ಉಪಕಾರ್ಯಾಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಗೌರವ ಕಾರ್ಯದರ್ಶಿ ಪ್ರೊ! ಅಜಿತ್  ಬಿ ಉಮ್ರಾಣಿ, ಜತೆ ಕಾರ್ಯದರ್ಶಿ ದಿನೇಶ್ ಬಿ ಕುಡ್ವ, ಕೋಶಾಧಿಕಾರಿ ತಾರಾನಾಥ ಸೂರು ಅಮೀನ್ , ಜತೆ ಕೋಶಾಧಿಕಾರಿ ವಿಮಲಾ ವಿ ಶೆಟ್ಟಿ ಹಾಗೂ ಕಾರ್ಯಕಾರಿ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

1st Rank -ಕು. ಪ್ರಣೀತ  ಕೈಲಾಸ್ ಕುಹರ್ಡೆ 95.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

2 nd Rank -ಗುರವ್ ಗುಪ್ತ 95.00 % ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

3rd Rank -ಪ್ರಣವ್ ಕೈಲಾಶ್ ಕುರ್ಹಡೆ 94.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ



Related posts

ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮನೆ-ಮನೆಯಲ್ಲಿ ಭಜನಾ ಕಾರ್ಯಕ್ರಮ

Mumbai News Desk

ಶಹಾಡ್‌ ಶ್ರೀ ಮೂಕಾಂಬಿಕಾ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ಸಂಪನ್ನ

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ -ಖೋಪರ್‌ಖೈರ್ನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ ದಶಮಾನೋತ್ಸವ ಆಚರಣೆ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ : ವಾರ್ಷಿಕ ವಿಹಾರ ಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಭಾರತ್ ಬ್ಯಾಂಕ್ ವಿರಾರ್ ಪಶ್ಚಿಮ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಯಿ ಇವರ ವತಿಯಿಂದ ಅರಿಶಿನ ಕುಂಕುಮ ಹಾಗೂ  ವಾರ್ಷಿಕ ಸಭೆ

Mumbai News Desk