32 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ





 ಉಡುಪಿ ಮೇ 28.   ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಶ್ರೀ ಮಹಾ ಚಂಡಿಕಾಯಾಗ ಮಹಾ ಸಂಪ್ರೋಕ್ಷಣೆ ಮಹಾಮಂತ್ರಕ್ಷತೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು…

 ಕ್ಷೇತ್ರದಲ್ಲಿ ಕಿಕ್ಕಿರಿದು ತುಂಬಿದ ಭಕ್ತ ಸಮೂಹದ ಸಮಕ್ಷಮದಲ್ಲಿ ಕೊಲಕಡಿ   

ವೇದಮೂರ್ತಿ ವಾದಿರಾಜ ಉಪಾಧ್ಯಾಯ ಅವರು ಚಂಡಿಕಾಯಾಗ ನೆರವೇರಿಸಿದರು..

 ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಆಚಾರ್ಯ ಪೂಜೆ ದಂಪತಿ ಪೂಜೆ ಬ್ರಹ್ಮಚಾರಿ ಆರಾಧನೆಗಳು  ನೆರವೇರಿದವು.. 

 ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸೇವೆ  ಭ್ರಮರಿ ನಾಟ್ಯಾಲಯದ ವಿದ್ವಾನ್ ಭವಾನಿ ಶಂಕರ್ ಅವರ ಶಿಷ್ಯರಿಂದ ನೆರವೇರಿತು..

 ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಅಮ್ಮ ಡ್ರೀಮ್ಸ್ ಮೆಲೋಡಿಸ್  ನ  ಕಲಾವಿದರಾದ ಶ್ರೀಯುತ ಸುನಿಲ್ ಅಶ್ವಿನಿ ಹಾಗೂ ಬೇಬಿ ಪ್ರಿಯ ಸಂಗೀತ ಕಾರ್ಯಕ್ರಮ ನೆರವೇರಿಸಿದರು..

     ಮೃಷ್ಟಾನ್ನ ಸಂತರ್ಪಣೆಯ ನಂತರ ವಿಪ್ರೊತ್ತಮರಿಂದ  ದೇವಳದ ಪ್ರಾಂಗಣದಲ್ಲಿ  ಮಹಾಮಂತ್ರಾಕ್ಷತೆ ಸ್ವೀಕರಿಸಲಾಯಿತು..

  ಕಿಕ್ಕಿರಿದ  ಭಕ್ತ ಸಮೂಹದೊಂದಿಗೆ ಸಂಪನ್ನಗೊಂಡ ಚಂಡಿಕಾಯಾಗದ  ನೇತೃತ್ವವನ್ನು ಆನಂದ್ ಭಟ್ ಹೇರೂರು ಹಾಗೂ ಶ್ರೀ ಗಣೇಶ ಸರಳಾಯ  ವಹಿಸಿದ್ದರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ



Related posts

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk

ಕುಲಶೇಖರ ವೀರನಾರಾಯಣ ದೇವಸ್ಥಾನದ ಮೇಲ್ಛಾವಣಿ  ಲೋಕಾರ್ಪಣೆ

Mumbai News Desk

ಮೂಲ್ಕಿ: “ಅಮ್ಮನ ಆಸರೆ” ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk