32 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ






ಕಟಪಾಡಿ:- ಶ್ರೀ ಸಾಯಿ ಮುಖ್ಯ ಪ್ರಾಣದೇವಸ್ಥಾನ ಶ್ರೀ ದ್ವಾರಕಾಮಯಿ ಮಠ ಇದರ ವತಿಯಿಂದ ವಿಶ್ವ ಹಸಿವು ದಿನಾಚರಣೆ ಕಾರ್ಯಕ್ರಮ ಮೇ.28ರಂದು ನಡೆಯಿತು.


ಈ ಸಂದಭ೯ದಲ್ಲಿ ಮುಷ್ಠಿ ಅಕ್ಕಿ ಅಭಿಯಾನದ ಚಾಲನೆ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಬಿಜೆಪಿ ಮಹಿಳಾ
ಮೋಚಾ೯ ಮಾಜಿ ಜಿಲ್ಲಾದ್ಯಕ್ಷೆ ವೀಣಾ ಶೆಟ್ಟಿ ಕ್ಷೇತ್ರದ ವತಿಯಿಂದ ಸಾಯಿ ತುತ್ತು ಯೋಜನೆ ಮೂಲಕ ಸಾವಿರಾರು ನಿಗ೯ತಿಕರಿಗೆ ಅನ್ನದಾನ ನಡೆಯುತ್ತಿದೆ.ಈ ಮೂಲಕ ಹಸಿವು ಮುಕ್ತ ಸಮಾಜದ ನಿಮಾ೯ಣಕ್ಕೆ ಗುರೂಜಿಯವರಿಗೆ ನಾವೆಲ್ಲರೂ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕ್ಷೇತ್ರದ ಶ್ರೀ ಸಾಯಿ ಈಶ್ವರ ಗುರೂಜಿ ,ಸಾಯಿ ತುತ್ತು ಯೋಜನೆ ರಾಜ್ಯದಲ್ಲೆಡೆ ವಿಸ್ತರಿಸುವ ಸಂಕಲ್ಪ ಹೊಂದಲಾಗಿದ್ದು, ಪ್ರತಿಯೊಂದು ಕುಟುಂಬ ಒಂದು ಮುಷ್ಟಿ ಅಕ್ಕಿಯನ್ನು ಸಮಾಜದ ನಿಗ೯ತಿಕರಿಗೆ ನೀಡಲು ತೆಗೆದಿಡಬೇಕು .
ಆ ಮೂಲಕ ಹಸಿವು ಮುಕ್ತ ದೇಶದ ನಿರ್ಮಾಣಕ್ಕೆ ನಾವೆಲ್ಲರೂ ಕಂಕಣಭದ್ಧರಾಗಬೇಕು ಕ್ಷೇತ್ರದ ವತಿಯಿಂದ ವಿವಿಧ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳು ನಿತ್ಯ ನಿರಂತರ ನಡೆಯುತ್ತಿದ್ದು ಇದು ಎಲ್ಲರ ಸಹಕಾರದಿಂದ ಮತ್ತಷ್ಟು ವೇಗ ಪಡೆಯಿತುಕೊಳ್ಳುತ್ತಿರುವುದು ಸಂತೋಷದಾಯಕ ಎಂದರು.

ಈ ಸಂದಭ೯ದಲ್ಲಿ
ಪ್ರಕಾಶ್ ಆಚಾರ್ಯ, ವಿಜಯ ಕುಂದರ್, ನಾರಾಯಣ ಪೂಜಾರಿ,,ಶಿಲ್ಪಾ ಮಹೇಶ್
ಶ್ವೇತಾ ಜಯರಾಮ್,,ಭಾರತಿ ಸಂಧ್ಯಾ ರಾಜೇಶ್,ಸತೀಶ್ ದೇವಾಡಿಗ , ವಿಘೇಶ್ ನೀಲಾವರ, ನಿಲೇಶ್ ಸುಪ್ರೀತಾ , ಲಕ್ಷ್ಮೀ ಮುಂತಾದವರು ಉಪಸ್ಥಿತರಿದ್ದರು.ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿ, ವಂದಿಸಿದರು.



Related posts

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,

Mumbai News Desk

ಕೊಂಡೆವೂರು ಮಠದಲ್ಲಿ ಪ್ರತಿಷ್ಠಾವರ್ಧಂತಿ, ನವಚಂಡಿಕಾ ಯಾಗ . ಧಾರ್ಮಿಕ ಸಭೆ.

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk