April 1, 2025
ಮುಂಬಯಿ

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

ಮಹಾರಾಷ್ಟ್ರ ರಾಜ್ಯ ಶಿಕ್ಷಣ ಮಂಡಳಿಯ ವತಿಯಿಂದ 2023-2024ರ ಶೈಕ್ಷಣಿಕ ಸಾಲಿನ ಎಸ್. ಎಸ್. ಸಿ ಬೋರ್ಡ ಪರೀಕ್ಷೆಯಲ್ಲಿ ಮುಂಬಯಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಷಿಯೇಶನ್ ನಡೆಸಿಕೊಂಡು ಬರುತ್ತಿರುವ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಶೇ 100 ಫಲಿತಾಂಶ ದೊರಕಿದೆ. ಈ ಶಾಲೆಯಲ್ಲಿ ಹತ್ತನೇ ವರ್ಗದಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು ಶಾಲೆಗೆ ಶೇ 100 ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿಯಾದ ಮೀನಾಕ್ಷಿ ಹೇಮಾನಾಥ ಪೂಜಾರಿ ಶೇ 82 ಅಂಕಗಳನ್ನು ಪಡೆದು ಮುಂಬೈ ಕನ್ನಡ ಮಾಧ್ಯಮದ ರಾತ್ರಿ ಪ್ರೌಢ ಶಾಲೆಗಳಲ್ಲಿಯೇ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯರಾದ ಸರಸ್ವತಿ ಹನುಮಂತ ಕಾಂಬಳೆ ಶೇ 67 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಮತ್ತು ವಿದ್ಯಾರ್ಥಿ ಸಂದೀಪ ಸೋಮಶೇಖರ ಶೇ 61.80 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಹಕರಿಸಿದ ಪಾಲಕರಿಗೆ ಹಾಗೂ ಮಾರ್ಗದರ್ಶನ ನೀಡಿದ ಮುಖ್ಯಾಧ್ಯಾಪಕ ಮಲ್ಲಿಕಾರ್ಜುನ ಬಡಿಗೇರ ಮತ್ತು ಸಹಕರಿಸಿದ ಶಿಕ್ಷಕರ ವೃಂದದವರಿಗೆ ಮಾತೃಸಂಸ್ಥೆ ಬಿಲ್ಲವರ ಅಸೋಶಿಯೇಶನ್ ಇದರ ಅಧ್ಯಕ್ಷ ಶ್ರೀ ಹರೀಶ ಜಿ.ಅಮೀನ,ಗೌರವ ಪ್ರದಾನ ಕಾರ್ಯದರ್ಶಿ ಶ್ರೀ ಹರೀಶ. ಜಿ.ಸಾಲಿಯಾನ್, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಜಯ ವಿ. ಪೂಜಾರಿ, ಮಾರ್ಗದರ್ಶಕರಾದ ಬನ್ನಂಜೆ ರವೀಂದ್ರ ಅಮೀನ್ ಮತ್ತು ಸರ್ವ ಪದಾಧಿಕಾರಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ವರ್ಗದವರೆಗೂ ಕಲಿಯುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ 2024-2025 ರಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಕಲಿಕಾ ಉಪಕರಣ, ಬಸ್ಸು ಪಾಸ್, ಸಮವಸ್ತ್ರ ಒದಗಿಸಿ ಕೊಡಲಾಗುವುದು ಎಂದು ಬಿಲ್ಲವರ ಅಸೋಷಿಯೇಶನ್ ಇದರ ಗೌರವ ಪ್ರದಾನ ಕಾರ್ಯದರ್ಶಿ ಹರೀಶ. ಜಿ. ಸಾಲಿಯಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೈಸೂರು ಅಸೋಸಿಯೇಷನಲ್ಲಿ ಶ್ರೀರಂಗ ನಾಟಕೋತ್ಸವ  ಸಮರೋಪ

Mumbai News Desk

ಭಂಡಾರಿ ಸೇವಾ ಸಮಿತಿ ಮುಂಬಯಿ – 70ನೇ ವಾರ್ಷಿಕ ಕೌಟುಂಬಿಕ ಸ್ನೇಹ ಸಮ್ಮಿಲನ

Mumbai News Desk

ಘೋಡ್ ಬಂದರ್ ರೋಡ್ ಕನ್ನಡ ಅಸೋಶಿಯೇಶನ್ ಅನಾಥ ಮಕ್ಕಳ ನಿರ್ವಹಣಾ ಕೇಂದ್ರಕ್ಕೆ ಭೇಟಿ ಮತ್ತು ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮ

Mumbai News Desk

ಅಂಧೇರಿ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ವತಿಯಿಂದ ಒಡಿಯೂರು ಶ್ರೀ ಗಳಿಗೆ ಗುರುವಂದನೆ

Mumbai News Desk

ನವೋದಯ ಕನ್ನಡ ಸೇವಾ ಸಂಘ (ರಿ), ಥಾಣೆ ಇದರ ಆಯೋಜನೆಯಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ

Mumbai News Desk

ಬಿಲ್ಲವರ ಅಸೋಸಿಯೇಷನ್ ಬೊರಿವಿಲಿ ದಹಿಸರ್ ಸ್ಥಳೀಯ ಕಚೇರಿ ತುಳು ಸಂಪ್ರದಾಯ ಕಾರ್ಯಕ್ರಮ ಆಟಿಡೊಂಜಿ ಕೂಟ

Mumbai News Desk