September 6, 2026
Mumbai News Kannada
ಮುಂಬಯಿ

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ





ಮಹಾರಾಷ್ಟ್ರ ರಾಜ್ಯ ಶಿಕ್ಷಣ ಮಂಡಳಿಯ ವತಿಯಿಂದ 2023-2024ರ ಶೈಕ್ಷಣಿಕ ಸಾಲಿನ ಎಸ್. ಎಸ್. ಸಿ ಬೋರ್ಡ ಪರೀಕ್ಷೆಯಲ್ಲಿ ಮುಂಬಯಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಷಿಯೇಶನ್ ನಡೆಸಿಕೊಂಡು ಬರುತ್ತಿರುವ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಶೇ 100 ಫಲಿತಾಂಶ ದೊರಕಿದೆ. ಈ ಶಾಲೆಯಲ್ಲಿ ಹತ್ತನೇ ವರ್ಗದಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು ಶಾಲೆಗೆ ಶೇ 100 ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿಯಾದ ಮೀನಾಕ್ಷಿ ಹೇಮಾನಾಥ ಪೂಜಾರಿ ಶೇ 82 ಅಂಕಗಳನ್ನು ಪಡೆದು ಮುಂಬೈ ಕನ್ನಡ ಮಾಧ್ಯಮದ ರಾತ್ರಿ ಪ್ರೌಢ ಶಾಲೆಗಳಲ್ಲಿಯೇ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯರಾದ ಸರಸ್ವತಿ ಹನುಮಂತ ಕಾಂಬಳೆ ಶೇ 67 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಮತ್ತು ವಿದ್ಯಾರ್ಥಿ ಸಂದೀಪ ಸೋಮಶೇಖರ ಶೇ 61.80 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಹಕರಿಸಿದ ಪಾಲಕರಿಗೆ ಹಾಗೂ ಮಾರ್ಗದರ್ಶನ ನೀಡಿದ ಮುಖ್ಯಾಧ್ಯಾಪಕ ಮಲ್ಲಿಕಾರ್ಜುನ ಬಡಿಗೇರ ಮತ್ತು ಸಹಕರಿಸಿದ ಶಿಕ್ಷಕರ ವೃಂದದವರಿಗೆ ಮಾತೃಸಂಸ್ಥೆ ಬಿಲ್ಲವರ ಅಸೋಶಿಯೇಶನ್ ಇದರ ಅಧ್ಯಕ್ಷ ಶ್ರೀ ಹರೀಶ ಜಿ.ಅಮೀನ,ಗೌರವ ಪ್ರದಾನ ಕಾರ್ಯದರ್ಶಿ ಶ್ರೀ ಹರೀಶ. ಜಿ.ಸಾಲಿಯಾನ್, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಜಯ ವಿ. ಪೂಜಾರಿ, ಮಾರ್ಗದರ್ಶಕರಾದ ಬನ್ನಂಜೆ ರವೀಂದ್ರ ಅಮೀನ್ ಮತ್ತು ಸರ್ವ ಪದಾಧಿಕಾರಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ವರ್ಗದವರೆಗೂ ಕಲಿಯುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ. ಶೈಕ್ಷಣಿಕ ವರ್ಷ 2024-2025 ರಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಕಲಿಕಾ ಉಪಕರಣ, ಬಸ್ಸು ಪಾಸ್, ಸಮವಸ್ತ್ರ ಒದಗಿಸಿ ಕೊಡಲಾಗುವುದು ಎಂದು ಬಿಲ್ಲವರ ಅಸೋಷಿಯೇಶನ್ ಇದರ ಗೌರವ ಪ್ರದಾನ ಕಾರ್ಯದರ್ಶಿ ಹರೀಶ. ಜಿ. ಸಾಲಿಯಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ ಸಂಪನ್ನ.

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಬಂಟರ ಸಂಘ ಮುಂಬೈ ಅಂಧೇರಿ- ಬಾಂದ್ರಾ ಪ್ರಾದೇಶಿಕ ಸಮಿತಿ ಆಟಿಡೊಂಜಿ ಪೊರ್ಲು- ತಿರ್ಲ್, ಸಂಜೀವನಿ ಉದ್ಘಾಟನೆ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk

ಶ್ರೀ ರಜಕ ಸಂಘ ಮುಂಬಯಿ ಇದರ ಮಹಿಳಾ ವಿಭಾಗ ದಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಎಸ್ ಎಸ್ ಸಿ ಪರೀಕ್ಷೆ: ರಕ್ಷ್ಮಾ ಜಯಂತ್ ಕುಳಾಯಿಗೆ ಶೇ. 99.20 ಅಂಕ

Mumbai News Desk