32 C
Mumbai
April 24, 2026
Mumbai News Kannada
ಕ್ರೀಡೆ

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.





ಡಬ್ಲ್ಯೂ ಐಎಫ್ಎ (WIFA) ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಅವರು ಮುಂಬಯಿ ಜಿಲ್ಲೆಯಿಂದ ಆಯ್ಕೆಯಾಗಿದ್ದು ಮೇ 22 ರಂದು ಆರಂಭಗೊಂಡು ಮೇ 29 ರ ವರೆಗೆ ಶಿರ್ಪುರ್, ಧುಲೆ, ಇಲ್ಲಿ ನಡೆದ ಡಬ್ಲ್ಯೂ ಐಎಫ್ಎ ಅಂತರ ಜಿಲ್ಲಾ ಸಬ್ ಜೂನಿಯರ್ ಬಾಲಕರ ಪಂದ್ಯಾವಳಿ (Inter-District Sub Junior Boys Tournament ) ಅಂಡರ್13 ಸ್ಪರ್ಧೆಯಲ್ಲಿ ಮುಂಬಯಿ ತಂಡವನ್ನು ಸಮರ್ಥ್ ಸಿ. ರೈ ಪ್ರತಿನಿಧಿಸಿದ್ದಾರೆ.

ಮಹಾರಾಷ್ಟ್ರ ದ 32 ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮುಂಬೈ ಒಂದಾಗಿದೆ

ಅಂತರ ಜಿಲ್ಲಾ ಸಬ್ ಜೂನಿಯರ್ಸ್ ಬಾಲಕರ ಟೂರ್ನಮೆಂಟ್ ನಲ್ಲಿ ಆಯ್ಕೆಯಾಗಿರುವ ಸಮರ್ಥ್ ರೈ ಜಿಲ್ಲಾ ಮಟ್ಟದ ಫುಟ್ಬಾಲ್ ಟೂರ್ನಮೆಂಟ್ ಆಟವಾಡಿ ಥಾಣೆ ಜಿಲ್ಲೆ ಯನ್ನು 3-0 ಅಂತರದಿಂದ ಸೋಲಿಸಿ ಜಯಭೇರಿ ಸಾಧಿಸಿದ್ದಾರೆ. ಇದರಲ್ಲಿ ಸಮರ್ಥ್ ರೈ ಯವರು ಕೊನೆಯ 20 ನಿಮಿಷ ದಲ್ಲಿ ಎಂಟ್ರಿ ಮಾಡಿ ಒಂದು ಗೋಲ್ ಮತ್ತು ಒಂದು ಅಸಿಸ್ಟ ನಿಂದ 3-0 ಗೋಲನಲ್ಲಿ ಮುಂಬಯಿ ಯನ್ನು ಗೆಲ್ಲಿಸಲು ಸಹಾಯವಾದರು.

ಸಮರ್ಥ್ ರೈ ಕನಕಿಯಾ ಇಂಟರ್‌ನ್ಯಾಶನಲ್ ಮೀರಾ ಭಾಯಂದರ್‌ನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ. ಸಿಎಫ್ಸಿಐ ಕ್ಲಬ್ಬಿನಲ್ಲಿ ಫುಟ್ಬಾಲ್ ನ ತರಬೇತಿ ಪಡೆಯುತ್ತಿದ್ದಾರೆ

2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ .



Related posts

ಮುಂಬೈ ಕುಲಾಲ ಸಂಘದಿಂದ ಅದ್ಧೂರಿ ‘ಕುಲಾಲ ಕ್ರೀಡೋತ್ಸವ-2026’

Mumbai News Desk

ಭಾಯಂದರ್, ರೈ ಸುಮತಿ ಎಜುಕೇಷನಲ್ ಟ್ರಸ್ಟ್ ನ ಸೇಂಟ್ ಆಗ್ನೆಸ್ ಆಂಗ್ಲ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ಬ್ಯಾಡ್ಮಿಂಟನ್ ಸಾಧಕಿ  ದಿಯಾ ಮನೋಜ್ ಶೆಟ್ಟಿ ಮಾಜಿ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗೌರವ

Mumbai News Desk

ಸ್ಕೇಟಿಂಗ್ : ಅನಘಾ ಮತ್ತು ಆರ್ನಾ ಸಾಧನೆ

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಸಮಾರೋಪ ಸಮಾರಂಭ

Mumbai News Desk