September 6, 2026
Mumbai News Kannada
ಮುಂಬಯಿ

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.





ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.
ಉಡುಪಿ : ಇಂದು ಸಂಜೆ (ಜೂ. 5) ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಲಘು ಹೃದಯಘಾತವಾದ ಘಟನೆ ನಡೆದಿದ್ದು, ಚಾಲಕನು ತಕ್ಷಣ ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಸುರಕ್ಷಿತವಾಗಿ ಬಸ್ಸಿನಿಂದ ಇಳಿಯುವಂತಾಗಿದೆ.
ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಬಸ್ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ್ದು, ಬಸ್ಸಿನಲ್ಲಿ ಒಟ್ಟು 65 ಮಕ್ಕಳು ಪ್ರಯಾಣಿಸುತ್ತಿದ್ದರು.ಬಸ್ ಪೆರಂಪಳ್ಳಿಯಾಗಿ ಮಂಚಿಯತ್ತ ಸಾಗುತ್ತಿದ್ದಾಗ, ಬಸ್ ಚಾಲಕ ಅಲ್ವಿನ್ ಡಿಸೋಜ (52) ಅವರಿಗೆ ಲಘು ಹೃದಯಾಘಾತವಾಯಿತು, ಕೂಡಲೇ ಅಲ್ವಿನ್ ಅವರು ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



Related posts

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

“ಕೃಷ್ಣ ರಾಜಿ ಪ್ರಸಂಗೊ – ಅಂಕೊದ ಬೂಲ್ಯ” ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಮುಂಬೈ ತುಳು ಸಮುದಾಯದ ಸಾಂಸ್ಕೃತಿಕ ಸೊಬಗು

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ, ಗುರುಪೂರ್ಣಿಮೆ ಆಚರಣೆ – 2024

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ

Mumbai News Desk

ಮುಂಬೈ : ಮುಲುಂಡ್‌ನಲ್ಲಿ ನಿರ್ಮಾಣ ಹಂತದ ಮುಂಬೈ ಮೆಟ್ರೋ ಕಂಬದ ಒಂದು ಭಾಗ ಕುಸಿದು; 1 ಸಾವು, 3 ಜನರಿಗೆ ಗಾಯ

Mumbai News Desk