July 23, 2026
Mumbai News Kannada
ಮುಂಬಯಿ

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.







ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.
ಉಡುಪಿ : ಇಂದು ಸಂಜೆ (ಜೂ. 5) ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಲಘು ಹೃದಯಘಾತವಾದ ಘಟನೆ ನಡೆದಿದ್ದು, ಚಾಲಕನು ತಕ್ಷಣ ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಸುರಕ್ಷಿತವಾಗಿ ಬಸ್ಸಿನಿಂದ ಇಳಿಯುವಂತಾಗಿದೆ.
ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಬಸ್ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ್ದು, ಬಸ್ಸಿನಲ್ಲಿ ಒಟ್ಟು 65 ಮಕ್ಕಳು ಪ್ರಯಾಣಿಸುತ್ತಿದ್ದರು.ಬಸ್ ಪೆರಂಪಳ್ಳಿಯಾಗಿ ಮಂಚಿಯತ್ತ ಸಾಗುತ್ತಿದ್ದಾಗ, ಬಸ್ ಚಾಲಕ ಅಲ್ವಿನ್ ಡಿಸೋಜ (52) ಅವರಿಗೆ ಲಘು ಹೃದಯಾಘಾತವಾಯಿತು, ಕೂಡಲೇ ಅಲ್ವಿನ್ ಅವರು ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಸಭಾಭವನದ ಕಾಮಗಾರಿಯ ಕುರಿತು ವಿಶೇಷ ಸಭೆ

Mumbai News Desk

ಮುಂಬಯಿ: ಬಿಲ್ಲವರ ಅಸೋಸಿಯೇಷನ್ ವತಿಯಿಂದ ಸಾಹಿತ್ಯ, ಯಕ್ಷಗಾನ ಪ್ರಶಸ್ತಿ ಪ್ರದಾನ

Mumbai News Desk

ಮುಂಬೈ: ಭಾಯಂದರ್ ಪೂರ್ವದಲ್ಲಿ ಕಟ್ಟಡಕ್ಕೆ ನುಗ್ಗಿದ ದೊಡ್ಡ ಬೆಕ್ಕು(ಚಿರತೆ), 3 ಜನರಿಗೆ ಗಾಯ

Mumbai News Desk

ಕರ್ನಾಟಕ ಮಹಾಮಂಡಲ ಮೀರಾ ಬೈಂದರ್-(ರಿ) ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ

Mumbai News Desk

ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk

ಭಾರತ್ ಬ್ಯಾಂಕ್‌ನ ಗೋರೆಗಾಂವ್ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ

Mumbai News Desk