July 22, 2026
Mumbai News Kannada
ಪ್ರಕಟಣೆ

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 







ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ, ಕುರಾರ್ ವಿಲೇಜ್ ನಲ್ಲಿ ಶನಿ ಕಥೆ ಪ್ರವಚನ ಮತ್ತು ಶನಿ ಗ್ರಂಥ ವಾಚನ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜೂ.22 ಶನಿವಾರ, ಸಂಜೆ 6 ಗಂಟೆಗೆ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಹಾಗು ಸಲೆಹೆಗಾರರು ಮತ್ತು ಹಿರಿಯ ಶನಿ ಕಥಾ ಪ್ರವಚನಕಾರರಾದ ನಾರಾಯಣ್ ಶೆಟ್ಟಿ ಅವರ ಮುಖೆನ ಜರಗಲಿದೆ.

ಮುಂಬೈ ಮಹಾನಗರದಲ್ಲಿ ಸಮರ್ಥ ಅರ್ಥ ಹೇಳುವ ಶನಿ ಕಥಾ ಪ್ರವಚನಕಾರರ ಸಮಸ್ಸೆ ಈಗಾಗಲೇ ಎದ್ದು ಕಾಣುತ್ತಿದೆ, ಒಂದು ತಲೆಮಾರು ಕಳೆದ ನಂತರ ಮುಂದೆ ಶನಿ ಕಥೆ ಹೇಳುವ ಯುವ ಪ್ರತಿಭೆ ಈಗಾಗಲೇ ತಯಾರು ಮಾಡಬೇಕಿದೆ ಎನ್ನುವ ಕಾಳಜಿಯನ್ನು ಅರ್ಥೈಸಿಕೊಂಡ ಅಧ್ಯಕ್ಷರಾದ ಶ್ರೀನಿವಾಸ ಸಾಫಲ್ಯರು, ಯುವ ಪೀಳಿಗೆಗೆ ಶನಿ ಕಥೆ ಹೇಳುವ ರೀತಿ, ವಿಷಯ ಸಾಮ್ರಾಜ್ಯ, ಕಥೆಯಲ್ಲಿ ಅಡಕವಾದ ಒಳಅರ್ಥ ಮತ್ತು ಭಾವಾರ್ಥ, ಆದ್ಯಾತ್ಮಿಕ ಚೌಕಟ್ಟು, ಹಾಗು ಭಕ್ತಿ ಮಾರ್ಗ ಪ್ರಚೋದನೆ ಮತ್ತು ಗ್ರಂಥ ಪಠನೆಯ ರೀತಿ, ಪ್ರಾರಂಭ ಹಾಗು ಮುಕ್ತಾಯದ ಚೌಕಟ್ಟು, ಅಧ್ಯಾಯ ಮುಕ್ತಾಯದ ರೀತಿ ನೀತಿ ಯನ್ನು ಪ್ರತೀ ಭಾನುವಾರ ಸಂಜೆ 6 ರಿಂದ 8 ರ ತನಕ ದೇವಸ್ಥಾನದಲ್ಲಿ ಶ್ ಶ್ರೀನಿವಾಸ ಸಾಫಲ್ಯರು ಮತ್ತು ನಾರಾಯಣ್ ಶೆಟ್ಟಿ ಯವರು ಉಚಿತವಾಗಿ ತರಬೇತಿ ನೀಡಲಿದ್ದಾರೆ.

ಆಸಕ್ತಿಯುಳ್ಳ ಮಕ್ಕಳು, ಮಹಿಳೆಯರು ಮತ್ತು ಯುವಕರು, ಮಹನೀಯರು ಈ ತರಬೇತಿ ಯಲ್ಲಿ ಭಾಗವಹಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪೂಜಾ ಸಮಿತಿಯ ಉಪಾದ್ಯಕ್ಶರಾದ ರಮೇಶ್ ಆಚಾರ್ಯ ಇವರನ್ನು ಸಂಪರ್ಕಿಸಬಹುದು -೯೮೯೨೪೧೩೨೦೪. (9892413204)



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಉಡುಪಿ : ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದಿಂದ ಮೇ 24 ರಂದು ಭವ್ಯ ‘ಯುವ ಸಮ್ಮಿಲನ’ ಕಾರ್ಯಕ್ರಮ

Mumbai News Desk

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ವಿದ್ಯಾವಿಹಾರ್ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜೂನ್ 14ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಚಿತ್ರಕಲಾವಿದ ಜಯ್ ಸಾಲಿಯನ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

Mumbai News Desk