32 C
Mumbai
March 7, 2026
Mumbai News Kannada
ಪ್ರಕಟಣೆ

ಜು.7 ರಂದು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಸದಸ್ಯರ ನೋಂದಣಿ ಕಾರ್ಯಕ್ರಮ





ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಡೊಂಬಿವಲಿ ಮತ್ತು ಕಲ್ಯಾಣ ಪರಿಸರದ ಸಂಘದ ಸದಸ್ಯರ ಮಕ್ಕಳಿಗಾಗಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಜು. 7 ರಂದು ರವಿವಾರ ಮುಂಜಾನೆ 9.30 ಗಂಟೆಗೆ ಮೊಗವೀರ ವ್ಯವಸ್ಥಾಪಕ ಮಂಡಳಿ, ವೇದ ಬ್ರಹ್ಮ ಬಿಲ್ಡಿಂಗ್, 2ನೇ ಮಾಳಿಗೆ, ಲಿಜ್ಜತ್ ಪಾಪಡ್‌ನ ಮೇಲೆ, ಎಂ ಜಿ ರೋಡ್, ಡೊಂಬಿವಲಿ ಪಶ್ಚಿಮ ಇಲ್ಲಿ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಪತ್ರ (ಫಾರ್ಮ್) ಅನ್ನು ತುಂಬಿಸಿ ಆಧಾರ್‌ಕಾರ್ಡ್‌ ಮತ್ತು ಮಾರ್ಕ್‌ಕಾರ್ಡನ್ನು (ಕೈರಾಕ್ಸ್) ಅರ್ಜಿ ಪತ್ರದ ಜೊತೆಗೆ ಲಗತ್ತೀಕರಿಸಿ ಸಂಘದ ಕಚೇರಿಗೆ ಜೂ.30 ರ ಒಳಗೆ ತಲುಪಿಸಬೇಕಾಗಿ ವಿನಂತಿಸಲಾಗಿದೆ. ದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಮೊಗವೀರ ಮಹಾಜನ ಸೇವಾ ಸಂಘದ ಸದಸ್ಯತ್ವವನ್ನು ಪಡೆಯುವ ಸದಸ್ಯರಾಗಿ ಸಹಕರಿಸಬೇಕಾಗಿ ಕೂಡ ವಿನಂತಿಸಲಾಗಿದೆ.

ಸಂಘದ ಕಚೇರಿಯು ಜೂ. 24 ರಿಂದ ಪ್ರತಿನಿತ್ಯ ಸಂಜೆ 6 ಗಂಟೆಯಿಂದ 8.30 ಗಂಟೆಯವರೆಗೆ ಹಾಗೂ ಜೂ. 23 ಮತ್ತು ಜೂ.30 ರ ರವಿವಾರ ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರ್ಜಿ ಸ್ವೀಕರಿಸಲು ತೆರೆದಿಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂತೋಷ ಪುತ್ರನ್ – 9930023998, ರಾಜು ಮೊಗವೀರ ತಗ್ಗರ್ಸೆ – 9594299593, ಆನಂದ್ ಹೆಮ್ಮಾಡಿ 7400202963 ಮತ್ತು ನಿಶಾ ಮಂಡನ್ – 9967371724 ಕ್ಕೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.



Related posts

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ: ಜು 28ರಂದು ಆಶಾಡ ಹಬ್ಬ ಆಚರಣೆ,

Mumbai News Desk

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10 ನೇ ತರಗತಿಗೆ ನೇರ ಪ್ರವೇಶ. : ತುಳು ಕನ್ನಡಿಗರಿಗೆ ಸದಾವಕಾಶ

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ಎ. 6 ರಂದು ನಗರದ ಹೆಸರಾಂತ ಕನ್ನಡ ಮಾಸಿಕ ಛಾಯಾಕಿರಣ ಪತ್ರಿಕೆಯ ದಶಮಾನೋತ್ಸವ

Mumbai News Desk