30.5 C
Mumbai
June 8, 2026
Mumbai News Kannada
ಸುದ್ದಿ

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು





ಉಡುಪಿ ಜಿಲ್ಲೆಯ ನಾವುಂದ ಮೂರ್ತೆದಾರರ ಸೊಸೈಟಿಯ ಅಧ್ಯಕ್ಷರು ಹಾಗೂ ನಿರ್ದೇಶಕರ ಮಂಡಳಿಯ ಸಲಹೆಯ ಮೇರೆಗೆ 9 ಲಕ್ಷ ರೂಪಾಯಿಯನ್ನು ಆರುವರೆ ವರ್ಷ ಅವಧಿಗೆ ಡೆಪಾಸಿಟ್‌ ಇಟ್ಟರೆ ಅವಧಿ ಮುಗಿದ ಬಳಿಕ 18 ಲಕ್ಷ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿದ್ದರು. ಅದರಂತೆಯೇ ಉಮೇಶ್‌ ಅವರು 2021 ರ ಜುಲೈ 29 ರಂದು ಸೊಸೈಟಿಯಲ್ಲಿ 9 ಲಕ್ಷ ರೂಪಾಯಿ ಹಣವನ್ನು ಜಮೆ ಮಾಡಿದ್ದರು.
ಠೇವಣಿ ಇರಿಸಿದ್ರೆ 6 ವರ್ಷಗಳಲ್ಲೇ ಹಣವನ್ನು ಡಬ್ಬಲ್‌ ಮಾಡಿಕೊಡುವುದಾಗಿ ಭರವಸೆ ನೀಡಿ 9 ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್‌ ಇರಿಸಿಕೊಂಡು, ನಂತರ ಹಣ ವಾಪಾಸ್‌ ನೀಡದೇ ವಂಚಿಸಿರುವ ಕುರಿತು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಮೂರ್ತೆದಾರರ ಸೊಸೈಟಿ (Navunda Murthedarara Seva Sahakari Sangha ) ಯ ವಿರುದ್ದ ಆರೋಪ ಕೇಳಿಬಂದಿದ್ದು, ಸೊಸೈಟಿ ಸೇರಿದಂತೆ ಒಟ್ಟು 16 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಕುಂದಾಪುರ : ಠೇವಣಿ ಇರಿಸಿದ್ರೆ 6 ವರ್ಷಗಳಲ್ಲೇ ಹಣವನ್ನು ಡಬ್ಬಲ್‌ ಮಾಡಿಕೊಡುವುದಾಗಿ ಭರವಸೆ ನೀಡಿ 9 ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್‌ ಇರಿಸಿಕೊಂಡು, ನಂತರ ಹಣ ವಾಪಾಸ್‌ ನೀಡದೇ ವಂಚಿಸಿರುವ ಕುರಿತು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ನಿವಾಸಿಯಾಗಿರುವ ಉಮೇಶ್‌ ಎಂಬವರು ನಾವುಂದ ಮೂರ್ತೆದಾರರ ಸೊಸೈಟಿಯ ಅಧ್ಯಕ್ಷರು ಹಾಗೂ ನಿರ್ದೇಶಕರ ಮಂಡಳಿಯ ಸಲಹೆಯ ಮೇರೆಗೆ 9 ಲಕ್ಷ ರೂಪಾಯಿಯನ್ನು ಆರುವರೆ ವರ್ಷ ಅವಧಿಗೆ ಡೆಪಾಸಿಟ್‌ ಇಟ್ಟರೆ ಅವಧಿ ಮುಗಿದ ಬಳಿಕ 18 ಲಕ್ಷ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿದ್ದರು. ಅದರಂತೆಯೇ ಉಮೇಶ್‌ ಅವರು 2021 ರ ಜುಲೈ 29 ರಂದು ಸೊಸೈಟಿಯಲ್ಲಿ 9 ಲಕ್ಷ ರೂಪಾಯಿ ಹಣವನ್ನು ಜಮೆ ಮಾಡಿದ್ದರು.

ನಾವುಂದ ಮೂರ್ತೆದಾರರ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿಗಳು ಕಲ್ಪವೃಕ್ಷ ಬಾಂಡ್‌ ಸಿ ನಂಬರ್‌ ಇರುವ ದಾಖಲೆಯನ್ನು ನೀಡಿದ್ದರು. ಆದರೆ ಉಮೇಶ್‌ ಅವರಿಗೆ ಹಣದ ಸಮಸ್ಯೆ ಉಂಟಾದಾಗ ಸೊಸೈಟಿಗೆ ತೆರಳಿ ನಾವು ಡೆಪಾಸಿಟ್‌ ಇರಿಸಿದ್ದ ಹಣವನ್ನು ಹಿಂದಿರುಗಿಸುವಂತೆ ಕೇಳಿದ್ದಾರೆ. ಆದರೆ ಈ ವೇಳೆಯಲ್ಲಿ ಸೊಸೈಟಿಯವರು ಹಣ ನೀಡಲು ನಿರಾಕರಿಸಿದ್ದಾರೆ. ಸೊಸೈಟಯಲ್ಲಿ ನೀವು 9 ಲಕ್ಷ ರೂಪಾಯಿ ಹಣವನ್ನು ನೀವು ಜಮೆ ಮಾಡಿಲ್ಲ. ಸಿಸಿ ಬಾಂಡ್‌ಗೂ ಸೊಸೈಟಿಗೂ ಯಾವುದೇ ಸಂಬಂಧವಿಲ್ಲ, ನಿಮ್ಮ ಹಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಹಿಂಬರಹವನ್ನು ನೀಡಿದ್ದರು.

ಮೂರ್ತೆದಾರರ ಸೊಸೈಟಿಯಿಂದ ತನಗೆ ಅನ್ಯಾಯ ಆಗಿರುವ ಕುರಿತು ನ್ಯಾಯಾಲಯಕ್ಕೆ ದೂರು ನೀಡಿದ್ದರು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬೈಂದೂರು ಠಾಣೆಯ ಪೊಲೀಸರು ನಾವುಂದ ಮೂರ್ತೆದಾರರ ಸೊಸೈಟಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ ನೀಲಾಧರ ಪೂಜಾರಿ ನಾವುಂದ, ದಿನೇಶ ಪೂಜಾರಿ ಕೊಡೇರಿ , ಮೂರ್ತೆದಾರರ ಸೊಸೈಟಿಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಪ್ರತಿನಿಧಿ ವಿರುದ್ದ ಪ್ರಕರಣ ದಾಖಲಾಗಿದೆ.
ಮಾತ್ರವಲ್ಲದೇ ಅಧ್ಯಕ್ಷ ವಿಜಯ ಪೂಜಾರಿ ತ್ರಾಸಿ, ಉಪಾಧ್ಯಕ್ಷ ವಿಜಯ ಕುಮಾರ್ ಕೊಡೇರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಂಕರ ಪೂಜಾರಿ , ಗುಮಾಸ್ತೆ ದೀಪಾ ಪೂಜಾರಿ , ನಿರ್ದೇಶಕರುಗಳಾದ ಅಣ್ಣಪ್ಪ ಪೂಜಾರಿ ಮರವಂತೆ, ನಾರಾಯಣ ಪೂಜಾರಿ ನಾವುಂದ , ಬಾಬು ಪೂಜಾರಿ ನಾವುಂದ , ನಾರಾಯಣ ಪೂಜಾರಿ ಆಳೊಳ್ಳಿ, ಕೊಡೇರಿ , ವೆಂಕಟೇಶ ಪೂಜಾರಿ ಕೊಡೇರಿ, ಆನಂದ ಪೂಜಾರಿ ನಾವುಂದ, ಕೃಷ್ಣ ಪೂಜಾರಿ ನಾಗೂರು, ಪದ್ದು ಪೂಜಾರಿ ತ್ರಾಸಿ ಹಾಗೂ ಕವಿತಾ ಪೂಜಾರಿ ತ್ರಾಸಿ ಅವರ ವಿರುದ್ಧವೂ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ದೂರುದಾರರಿಂದ ಹಣವನ್ನು ಠೇವಣಿ ಇರಿಸಿಕೊಂಡು ಹಣವನ್ನು ಹಿಂದಿರುಗಿಸದೆ ನಂಬಿಸಿ ಮೋಸ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ



Related posts

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಡಿ.ಕೆ. ಶಿವಕುಮಾರ್ ಅವರಿಗೆ ಹಿತೈಷಿ ತೋನ್ಸೆ ಜಯಕೃಷ್ಣ ಶೆಟ್ಟಿ ಅವರಿಂದ ಆತ್ಮೀಯ ಅಭಿನಂದನೆ: ಪರಿಸರ ಸಂಘಟನೆಯ ಕಾರ್ಯವೈಖರಿಗೆ ನಿಯೋಜಿತ ಸಿಎಂ ಶ್ಲಾಘನೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk