34.2 C
Karnataka
March 29, 2025
ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಹೊನ್ನಾವರದ ಮರಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ನೋಟ್ ಬುಕ್ ಗಳನ್ನು ಉಚಿತವಾಗಿ ಮುಂಬಯಿ ಉದ್ಯಮಿ ಮಹಾದೇವ ಪೂಜಾರಿ ಕೊಡೇರಿ ಯವರು ನೀಡುತ್ತಾ ಬಂದಿದ್ದು ಈ ವರ್ಷವು ಕೂಡ ಉಚಿತ ಪುಸ್ತಕ ನೀಡಿರುವುದನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.


ಮಹಾದೇವ ಪೂಜಾರಿ ಯವರು ಪ್ರತಿ ವರ್ಷ ಈ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ನೀಡುವುದಲ್ಲದೆ ಐದು, ಆರು ಮತ್ತು ಏಳನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯರಾದ ನಾಗಪ್ಪ ನಾಯ್ಕ ಅವರ ಅಧ್ಯಕ್ಷತೆ ಹಾಗೂ ಸಹ ಶಿಕ್ಷಕರ ಉಪಸ್ಥಿತಿಯಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಸರ್ವ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸುವುದರೊಂದಿಗೆ ಕಳೆದ ಸಾಲಿನ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

Related posts

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Mumbai News Desk

ಕೊಡೇರಿಯಲ್ಲಿ ಜರಗಿದ ಅಂಚೆ ಜನ ಸಂಪರ್ಕ ಅಭಿಯಾನ

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಅಯೋಧ್ಯೆಯಿಂದ ಬಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ : 9 ದೀಪ ಬೆಳಗಿದ ಪೇಜಾವರ ಶ್ರೀಗಳು

Mumbai News Desk