32 C
Mumbai
March 7, 2026
Mumbai News Kannada
ಸುದ್ದಿ

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,





ಕರ್ನಿರೆ ಗ್ರಾಮದ ವಿದ್ಯಾರ್ಥಿಗಳ ಶಿಕ್ಷಣಕ್ಕೆ  ಸಹಕಾರವಿದೆ: ಕರ್ನಿರೆ ವಿಶ್ವನಾಥ್ ಶೆಟ್ಟಿ,

       ಕಿನ್ನಿಗೋಳಿ: ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಕಳೆದ 27 ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತಿದ್ದೇನೆ ಎಂದು ಕರ್ನಿರೆ ಫೌಂಡೇಷನ್ ಪ್ರವರ್ತಕ ಕರ್ನಿರೆ ವಿಶ್ವನಾಥ ಶೆಟ್ಟಿ ಹೇಳಿದರು,

  ಅವರು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಕರ್ನಿರೆ ಇಲ್ಲಿ ಕರ್ನಿರೆ ಫೌಂಡೇಷನ್ ವತಿಯಿಂದ ನಡೆದ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ ವಿದೇಶದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ, ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ ಇದ್ದರೆ ಗುರಿ ತಲುಪಲು ಸಾದ್ಯ, ಶಿಕ್ಷಣಕ್ಕೆ ಸಹಕಾರ ನೀಡುವ ಬಗ್ಗೆ ನನ್ನ ತಾಯಿಗೂ ಸಂತಸವಿತ್ತು, ಅವರ ಆಸೆಯಂತೆ ನಿರಂತರ ಶಿಕ್ಷಣಕ್ಕೆ ನೀಡುವ ಸಹಕಾರವನ್ನು ಮುಂದುವರಿಸುತ್ತೇನೆ ಎಂದರು

        ಉದ್ಯಮಿ ಕೆ.ಎಸ್ ಅಶ್ರಪ್ ಮಾತನಾಡಿ ನಾನು ಇದೇ ಶಾಲೆಯಲ್ಲಿ ಕಲಿತವನು, ತಂದೆ ನನಗೆ ಉತ್ತಮ ಶಿಕ್ಷಣ ಕೊಟ್ಟ ಕಾರಣ ನಮ್ಮ‌ಭವಿಷ್ಯವನ್ನು ರೂಪಿಸಲು ಸಾದ್ಯವಾಯಿತು, ತಂದೆ ತಾಯಿ ಮಕ್ಕಳಿಗೆ ಶಿಕ್ಷಣ ಕೊಟ್ಟರೆ ಅದೇ ದೊಡ್ಡ ಆಸ್ತಿ, ಬೇರೆ ಆಸ್ತಿ ಬೇಡ, ಶಿಕ್ಷಣಕ್ಕೆ ನನ್ನಿಂದ ಯಾವುದೇ ಸಹಕಾರ ನೀಡುತ್ತೇನೆ ಎಂದರು. ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ನೀಡಲಾಯಿತು,  ಈ ಸಂದರ್ಭ ಹರಿಶ್ಚಂದ್ರ ಶೆಟ್ಟಿ ಕರ್ನಿರೆಗುತ್ತು, ಗಂಗಾಗಧರ ಎನ್ ಅಮೀನ್ ಕರ್ನಿರೆ , ಮೋಹನ್ ಶೆಟ್ಟಿ, ರವೀಂದ್ರ ಶೆಟ್ಟಿ,  ಬಳ್ಕುಂಜೆ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ, ವನಜಾ ಕೋಟ್ಯಾನ್,   ಬಳ್ಕುಂಜೆ ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ  ಶೆಟ್ಟಿ, ಸಂಪತ್ ಶೆಟ್ಟಿ ಕರ್ನಿರೆಗುತ್ತು , ಹಿರಿಯ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರಸಾದ್ ಶೆಟ್ಟಿ, ಉದ್ಯಮಿ ವಿಲ್ಸನ್ ಪೆರ್ನಾಂಡಿಸ್, ಉದ್ಯಮಿ ಕೆ.ಎಸ್ ಆಶ್ರಪ್,    ಎಸ್ ಡಿ.ಎಂಸಿ ಅಧ್ಯಕ್ಷೆ ಹೆಮಲತಾ ಮತ್ತಿತರರು ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕಿ ಜೂಲೆಟ್ ಲೂವಿಸ್  ಸ್ವಾಗತಿಸಿ, ಸಹ ಶಿಕ್ಷಕ ಸಂತೋಷ್ ನಿರೂಪಿಸಿದರು.



Related posts

ದೆಹಲಿ : ಕೆಂಪು ಕೋಟೆ ಬಳಿ ಸ್ಫೋಟ, 10 ಸಾವು; ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk

ಯುಎಇ ಬಂಟ್ಸ್ ಸಂಘದ ವತಿಯಿಂದ ನಡೆದ”ದುಬೈದ ಬಂಟೆರ್ನ ಆಟಿಡೊಂಜಿ ದಿನ”

Mumbai News Desk

ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk