32 C
Mumbai
March 7, 2026
Mumbai News Kannada
ಸುದ್ದಿ

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ





ಹಿರಿಯ ರಂಗ ತಪಸ್ವಿ, ಲೇಖಕ, ಚಿತ್ರ ನಿರ್ಮಾಪಕ
ಸದಾನಂದ ಸುವರ್ಣ ಇಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು, ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮೂಲತಃ ಮುಲ್ಕಿಯವರಾದ ಸದಾನಂದ ಸುವರ್ಣ ಅವರು ಹಲವು ವರ್ಷಗಳ ಕಾಲ ಮುಂಬೈ ನಲ್ಲಿ ನೆಲೆಸಿದ್ದರು. ಮುಂಬೈಯಲ್ಲಿ ಬಹಳ ಕಷ್ಟದಲ್ಲಿ ವಿದ್ಯಾಭ್ಯಾಸ ಮಾಡಿದ ಸದಾನಂದ ಸುವರ್ಣರು 10 ವರ್ಷಗಳ ಕಾಲ ಖಾಸಾಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿದ್ದರು. ಬಳಿಕ ಸಾಹಿತ್ಯ,ರಂಗಭೂಮಿ, ಸಿನಿಮಾಗಳಲ್ಲಿ ಆಸಕ್ತಿ ಬೆಳೆಸಿದ್ದ ಅವರು ಕಳೆದ ಹತ್ತು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು.
ಕನ್ನಡ ರಂಗಭೂಮಿಯಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ ಸದಾನಂದ ಸುವರ್ಣರ ಉರುಳು, ಕೋರ್ಟ್ ಮಾರ್ಷಲ್, ಡೊಂಕು ಬಾಲದ ನಾಯಕರು, ಧರ್ಮ ಚಕ್ರ, ಸುಳಿ ಅವರಿಗೆ ಬಹಳ ಖ್ಯಾತಿಯನ್ನು ತಂದಿತ್ತು. ಸುವರ್ಣರು ನಿರ್ಮಿಸಿ, ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಘಟಶ್ರಾದ್ಧ ಸಿನಿಮಾಕ್ಕೆ ಸ್ವರ್ಣ ಕಮಲ ಪ್ರಶಸ್ತಿ ಲಭಿಸಿದೆ, ಹಾಗೂ ಅವರ ಗುಡ್ಡೆದ ಭೂತ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರಗೊಂಡು ಜನ ಮೆಚ್ಚುಗೆ ಗಳಿಸಿತ್ತು.
ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಾನು ಬೆಳೆಯುತ್ತಾ ನೂರಾರು ಕಿರಿಯ ಕಲಾವಿದರನ್ನು ಬೆಳೆಸಿದ್ದರು, ಸದಾನಂದ ಸುವರ್ಣರು ಮುಂಬೈ ಹಾಗೂ ಮಂಗಳೂರಿನ ರಂಗಭೂಮಿಗೆ ನೀಡಿದ ಕೊಡುಗೆ ಅನನ್ಯ.
ಅವರು ಗಿರೀಶ್ ಕಾಸರವಳ್ಳಿ, ಪ್ರಕಾಶ್ ರೈ ಅವರಂಥ ಅಪ್ರತಿಮ ಪ್ರತಿಭೆಗಳನ್ನು ಗುರುತಿಸಿ ಅವರ ಪ್ರತಿಭಾ ಪ್ರಧರ್ಶನಕ್ಕೆ ಅವಕಾಶ ನೀಡಿದವರು. ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮಾಡಿ ಬಾಲಿವುಡ್ ನ ಖ್ಯಾತ ನಟ ನಸಿರುದ್ಧಿನ್ ಶಾ ನಟಿಸಿದ ಮನೆ ಹಾಗೂ ಕಾಸರಳ್ಳಿ ಅವರ ನಿರ್ದೇಶನದ ಚಾರುಹಾಸನ್ ನಟಿಸಿದ ತಬರನ ಕಥೆ ಸಿನಿಮಾಕ್ಕೆ ಸುವರ್ಣರು ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು, ಅಲ್ಲದೆ ಕುಬಿ ಮತ್ತು ಇಯಲಾ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.
ಮಂಗಳೂರಿನ ಪುರಭವನದಲ್ಲಿ ಮೃತರ ಅಂತಿಮ ದರ್ಶನ ನಾಳೆ (ಜು. 17)ಮಧ್ಯಾಹ್ನ 1 ರಿಂದ 3 ಗಂಟೆಗೆ ತನಕ ನಡೆಯಲಿದ್ದು, ಬಳಿಕ ಅವರ ಇಚ್ಛೆಯಂತ್ತೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.



Related posts

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಕೇಂದ್ರ ಬಜೆಟ್ 2026 : ವಿಕಸಿತ ಭಾರತ – 2047ಕ್ಕೆ ಭದ್ರ ಬುನಾದಿ

Mumbai News Desk

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk