30.9 C
Mumbai
June 8, 2026
Mumbai News Kannada
ಸುದ್ದಿ

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ





ದಿನೇಶ್ ಕುಲಾಲ್ 

ಮುಂಬಯಿ ಜು 17.   ಶ್ರೀ ಕ್ಷೇತ್ರ  ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು  ಜುಲೈ 17 ರಿಂದ. ಜುಲೈ 29 ರ ವರೆಗೆ ಮುಂಬಯಿಯ ವಿವಿಧ ಉಪನಗರಗಳಲ್ಲಿ ಹಾಗೂ ನವಿಮುಂಬಯಿ ಮತ್ತು ಥಾಣೆಯಲ್ಲಿ ವಿವಿಧ ಧಾರ್ಮಿಕ  ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಂದು ಜುಲೈ 17ರಂದು ಮುಂಬೈ ನಗರಕ್ಕೆ ಆಗಮಿಸಿದ್ದರು ಅವರನ್ನು ಭಕ್ತರು ಭಕ್ತಿ ಪೂರ್ವಕವಾಗಿ ಮುಂಬೈ ಮಹಾನಗರದ ವಿಮಾನ ನಿಲ್ದಾನದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ   ಸ್ವಾದಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದರು

ಸ್ವಾಮೀಜಿಯವರನ್ನು. ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ, ಅಧ್ಯಕ್ಷರು ಪದಾಧಿಕಾರಿಗಳು,ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಪದಾಧಿಕಾರಿಗಳು ಸದಸ್ಯರು ಹಾಗೂ  ಒಡಿಯೂರು ಶ್ರೀ ಯುವ ಸೇವಾ ಬಳಗ ಸದಸ್ಯರು ತುಳಸಿ ಹಾರವನ್ನು  ಸಮರ್ಪಿಸಿ ನಗರಕ್ಕೆ ಸ್ವಾಗತಿಸಿದರು

   ಜುಲೈ 18ರಂದು ನವಿ ಮುಂಬಯಿಯ ಜುಹಿ ನಗರ,   ಸಾನ್ಪಾಡ ದಲ್ಲಿರುವ ಬಿಲ್ಲವರ ಅಸೋಸಿಯೇಷನ್ ಇವರ ನೂತನ ಸಮುದಾಯ ಭವನಕ್ಕೆ ಭೇಟಿ ನೀಡಿ ಸಂಜೆ 7ರಿಂದ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮವುಜರಗಲಿದೆ. ಜುಲೈ 19ರಂದು ದಾಮೋದರ್ ಎಸ್  ಶೆಟ್ಟಿ, ಖರ್ ರ್ಗರ್ ನವಿ ಮುಂಬಯಿ ಇಲ್ಲಿ ಸಾರ್ವಜನಿಕ ದರ್ಶನ, ಹಾಗೂ ಜುಲೈ 20ರಂದು ಚೆಂಬೂರು ಛಡ್ ನಗರ್, ಇಂಡಿಯನ್ ಒಯಿಲ್ ನಗರ್ ನಲ್ಲಿರುವ ನ್ಯಾಯವಾದಿ ಕೆಪಿ ಪ್ರಕಾಶ್ ಎಲ್ ಶೆಟ್ಟಿ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನ ಕಾರ್ಯಕ್ರಮ ನಡೆಯಲಿದೆ. ಜುಲೈ 21ರಂದು ರವಿವಾರ ಸಂಜೆ 4:00ಯಿಂದ ಬಂಟರ ಭವನದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುದೇವ ಸೇವಾ ಬಳಗ ಮುಂಬಯಿ ಘಟಕದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.



Related posts

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk