30 C
Mumbai
April 24, 2026
Mumbai News Kannada
ಸುದ್ದಿ

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ





ದಿನೇಶ್ ಕುಲಾಲ್ 

ಮುಂಬಯಿ ಜು 17.   ಶ್ರೀ ಕ್ಷೇತ್ರ  ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು  ಜುಲೈ 17 ರಿಂದ. ಜುಲೈ 29 ರ ವರೆಗೆ ಮುಂಬಯಿಯ ವಿವಿಧ ಉಪನಗರಗಳಲ್ಲಿ ಹಾಗೂ ನವಿಮುಂಬಯಿ ಮತ್ತು ಥಾಣೆಯಲ್ಲಿ ವಿವಿಧ ಧಾರ್ಮಿಕ  ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಂದು ಜುಲೈ 17ರಂದು ಮುಂಬೈ ನಗರಕ್ಕೆ ಆಗಮಿಸಿದ್ದರು ಅವರನ್ನು ಭಕ್ತರು ಭಕ್ತಿ ಪೂರ್ವಕವಾಗಿ ಮುಂಬೈ ಮಹಾನಗರದ ವಿಮಾನ ನಿಲ್ದಾನದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ   ಸ್ವಾದಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದರು

ಸ್ವಾಮೀಜಿಯವರನ್ನು. ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ, ಅಧ್ಯಕ್ಷರು ಪದಾಧಿಕಾರಿಗಳು,ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಪದಾಧಿಕಾರಿಗಳು ಸದಸ್ಯರು ಹಾಗೂ  ಒಡಿಯೂರು ಶ್ರೀ ಯುವ ಸೇವಾ ಬಳಗ ಸದಸ್ಯರು ತುಳಸಿ ಹಾರವನ್ನು  ಸಮರ್ಪಿಸಿ ನಗರಕ್ಕೆ ಸ್ವಾಗತಿಸಿದರು

   ಜುಲೈ 18ರಂದು ನವಿ ಮುಂಬಯಿಯ ಜುಹಿ ನಗರ,   ಸಾನ್ಪಾಡ ದಲ್ಲಿರುವ ಬಿಲ್ಲವರ ಅಸೋಸಿಯೇಷನ್ ಇವರ ನೂತನ ಸಮುದಾಯ ಭವನಕ್ಕೆ ಭೇಟಿ ನೀಡಿ ಸಂಜೆ 7ರಿಂದ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮವುಜರಗಲಿದೆ. ಜುಲೈ 19ರಂದು ದಾಮೋದರ್ ಎಸ್  ಶೆಟ್ಟಿ, ಖರ್ ರ್ಗರ್ ನವಿ ಮುಂಬಯಿ ಇಲ್ಲಿ ಸಾರ್ವಜನಿಕ ದರ್ಶನ, ಹಾಗೂ ಜುಲೈ 20ರಂದು ಚೆಂಬೂರು ಛಡ್ ನಗರ್, ಇಂಡಿಯನ್ ಒಯಿಲ್ ನಗರ್ ನಲ್ಲಿರುವ ನ್ಯಾಯವಾದಿ ಕೆಪಿ ಪ್ರಕಾಶ್ ಎಲ್ ಶೆಟ್ಟಿ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನ ಕಾರ್ಯಕ್ರಮ ನಡೆಯಲಿದೆ. ಜುಲೈ 21ರಂದು ರವಿವಾರ ಸಂಜೆ 4:00ಯಿಂದ ಬಂಟರ ಭವನದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುದೇವ ಸೇವಾ ಬಳಗ ಮುಂಬಯಿ ಘಟಕದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.



Related posts

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ:

Chandrahas

ಮುಲುಂಡ್‌ :    ಲ!  ಜಯರಾಮ್ ಮೂಲ್ಯ ನಿಧನ

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 

Mumbai News Desk